ಸೆಲ್ಫಿ ಕ್ರೇಜ್ ತೆಗೆಯಿತು ಮೂರು ವಿದ್ಯಾರ್ಥಿಗಳ ಜೀವ

Date:

ರಾಮನಗರ : ಸೆಲ್ಫಿ ತೆಗೆದುಕೊಳ್ಳಲು ಹೋದ ಮೂವರು ವಿದ್ಯಾರ್ಥಿಗಳು ರೈಲಿಗೆ ಸಿಲುಕಿ ದುರ್ಮರಣವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಬಿಡದಿ ಸಮೀಪದ ವಂಡರ್ ಲಾ ಮಂಚನಾಯಕನ ಹಳ್ಳಿಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿಗಳ ದೇಹ ಗುರುತು ಸಿಗದಂತೆ ಛಿದ್ರವಾಗಿದೆ.
ಮೃತ ಮೂವರು ಯುವಕರು ರೈಲ್ವೆ ಹಳಿಯ ಮೇಲೆ ನಿಂತು ಫೋಟೋ ಕ್ಲಿಕ್ಕಿಸುವಾಗ ರೈಲಿಗೆ ಸಿಲುಕಿದ್ದಾರೆ. ಘಟನೆ ನಡೆದ ಸ್ಥಳ ಯಾರೂ ಓಡಾಡುವ ಸ್ಥಳವಲ್ಲ. ಈ ವಿದ್ಯಾರ್ಥಿಗಳು ರೈಲು ಬರುವುದನ್ನು ನೋಡಿ, ಅದರ ಜೊತೆ ಸೆಲ್ಫಿ ತೆಗೆದುಕೊಳ್ಳುವ ಹುಚ್ಚು ಸಾಹಸಕ್ಕೆ ಕೈ ಹಾಕಿ ಜೀವವನ್ನು ಕಳೆದುಕೊಂಡಿದ್ದಾರೆ ಎನ್ನಲಾಗಿದೆ.


ಮೃತರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದ್ದು,ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ದೇಹ ಗರುತು ಸಿಗದಂತೆ ಆಗಿರುವುದರಿಂದ ಪತ್ತೆ ಕಾರ್ಯ ವಿಳಂಬವಾಗಿದೆ. ಇನ್ನು ಇವರ ಐಡಿ ಕಾರ್ಡ್ ಇತ್ಯಾದಿ ದಾಖಲೆಗಳು ಸಿಕ್ಕರೆ ಅದರ ಸಹಾಯದಿಂದ ಇವರಾರು ಎಂಬುದನ್ನು ಪತ್ತೆ ಮಾಡಬೇಕಿದೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...