ಪ್ರವಾಸಿ ಶ್ರೀಲಂಕಾ ತಂಡದ ವಿರುದ್ಧ ಆತಿಥೇಯ ಭಾರತ ತಂಡ 5 ವಿಕೆಟ್ಗಳ ಗೆಲುವು ದಾಖಲಿಸಿದೆ.
ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ಇಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ನಿಗಧಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 135 ರನ್ ಗಳಿಸಿತು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ 4 ಎಸೆತ ಬಾಕಿ ಇರುವಂತೆ 5 ವಿಕೆಟ್ ಕಳೆದುಕೊಂಡು 139 ರನ್ ಗಳಿಸೋ ಮೂಲಕ ಗೆಲುವಿನ ಕೇಕೆ ಹಾಕಿತು.
ಭಾರತದ ಪರ ನಾಯಕ ರೋಹಿತ್ ಶರ್ಮಾ 27, ರಾಹುಲ್4, ಶ್ರೇಯಸ್ ಐಯ್ಯರ್ 30, ಮನೀಶ್ ಪಾಂಡೆ 32, ಹಾರ್ದಿಕ್ ಪಾಂಡ್ಯ 4 ರನ್ ಗಳಿಸಿದರು. ದಿನೇಶ್ ಕಾರ್ತಿಕ್ (18) ಮಹೇಂದ್ರ ಸಿಂಗ್ ಧೋನಿ (16) ರನ್ ಗೆಲುವಿನ ದಡ ಸೇರಿಸಿದರು.
ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು.