ಅಪ್ರಾಪ್ತೆಯನ್ನು ಕಿಡ್ನಾಪ್ ಮಾಡಿ ಮದ್ವೆಯಾಗಿ, ಅವಳ‌ ಶವದ ಜೊತೆ ಬಂದ…!

Date:

ಯುವಕನೊಬ್ಬ ಅಪ್ರಾಪ್ತೆಯನ್ನು ಪ್ರೀತಿಸಿ, ಆಕೆಯನ್ನು ಕಿಡ್ನಾಪ್ ಮಾಡಿ , ಒತ್ತಾಯಿಸಿ ಮದ್ವೆ ಮಾಡಿಕೊಂಡು, ಅವಳ ಶವದ ಜೊತೆ ಊರಿಗೆ ಮರಳಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ತಮ್ಮಣ್ಣ ಕಾಲೋನಿ ನಿವಾಸಿ ಆನಂದ್ ( 28) ಅದೇ ಕಾಲೋನಿಯ ಅಪ್ರಾಪ್ತೆಯನ್ನು ಪ್ರೀತಿಸಿ, ಕಿಡ್ನಾಪ್ ಮಾಡಿ , ಒತ್ತಾಯದಿಂದ ಮದ್ವೆಯಾಗಿದ್ದ.‌


ಈ ಬಗ್ಗೆ ಬಾಲಕಿ ಪೋಷಕರು ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ , ಇಬ್ಬರೂ ಪತ್ತೆಯಾಗಿರಲಿಲ್ಲ‌.
ಆನಂದ್ 1ವರ್ಷಗಳ ಕಾಲ ಹೊಸ ಪೇಟೆಯಲ್ಲಿ ಆಕೆಯೊಂದಿಗೆ ಸಂಸಾರ ಮಾಡಿದ್ದಾನೆ. ಗುರುವಾರ ರಾತ್ರಿ ಅವಳು ಮೃತಪಟ್ಟಿರುವುದಾಗಿ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ.


ಪತ್ನಿಯ ಮೃತದೇಹದೊಂದಿಗೆ ಭದ್ರಾವತಿಗೆ ಆಗಮಿಸಿದ ಆನಂದ್ ಗೆ ಸಂಬಂಧಿಕರು, ಸಾರ್ವಜನಿಕರು‌ ಥಳಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಬೇಕಾದ ಸ್ಥಿತಿಯೂ ನಿರ್ಮಾಣವಾಗಿತ್ತು. ಆನಂದ್ ತನ್ನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುತ್ತಿದ್ದಾನೆ. ಬಾಲಕಿಯ ಸಂಬಂಧಿಕರು ಆನಂದೇ ಕೊಲೆ ಮಾಡಿ, ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾನೆ . ಅವನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸುತ್ತಿದ್ದಾರೆ.‌

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು...

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು: ಸಚಿವ ಮಧು ಬಂಗಾರಪ್ಪ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು:...

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ?

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ? ಬೆಲೆ ಏರಲಿ,...

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು ನಿಂಬೆಹಣ್ಣು ನಮ್ಮ...