ನಾಯಕತ್ವ ತ್ಯಜಿಸಿದ ಗಂಭೀರ್ ದುಡ್ಡು ಕೂಡ ಬೇಡ ಅಂದ್ರು…!

Date:

ಸತತ ಸೋಲಿನಿಂದ ಒತ್ತಡಕ್ಕೆ ಒಳಗಾಗಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕತ್ವ ತ್ಯಜಿಸಿರುವ ಗೌತಮ್ ಗಂಭೀರ್ ಪ್ರಾಂಚೈಸಿಯಿಂದ ಯಾವುದೇ ರೀತಿಯ ಹಣ ಪಡೆಯದಿರಲು ನಿರ್ಧರಿಸಿದ್ದಾರೆ.
ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಗೌತಮ್ ಗಂಭೀರ್ ಅವರನ್ನು 2.8ಕೋಟಿ ರೂ ಗಳಿಗೆ ಡೆಲ್ಲಿ ಖರೀದಿಸಿತ್ತು.


ಹಿಂದೆ ಕೆಕೆಆರ್ ನಲ್ಲಿರುವಾಗ ನಾಯಕನಾಗಿ ಎರಡು ಬಾರಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಗೌತಿ ಈ ಬಾರಿ ಡೆಲ್ಲಿ ತಂಡದ ನಾಯಕರಾಗಿದ್ದಾರೆ. ಆದರೆ, ತಂಡ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ.

ಒಂದೆಡೆ ತಂಡದ ಸೋಲಾದರೆ ಒಬ್ಬ ಬ್ಯಾಟ್ಸ್‌ಮನ್‌ ಆಗಿಯೂ ಗಂಭೀರ್ ಉತ್ತಮ‌ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ‌. ಮೊದಲ ಪಂದ್ಯದಲ್ಲಿನ 55ರನ್ ಸೇರಿದಂತೆ 85ರನ್ ಮಾತ್ರ ಗಳಿಸಿದ್ದಾರೆ.
ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹಣ ಕೂಡ ಬೇಡ ಅಂದಿದ್ದಾರೆ. ಉಳಿದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವವಹಿಸಿಕೊಳ್ಳಲಿದ್ದಾರೆ. ಗೌತಿ ಆಟಗಾರನಾಗಿ ತಂಡದಲ್ಲಿರುತ್ತಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...