ಎಬಿಡಿ ಅನುಪಸ್ಥಿತಿಯಲ್ಲಿ ಅಭಿಮಾನಿಗಳಿಗೆ ಖುಷಿಕೊಟ್ಟಿದ್ದು ದ್ರಾವಿಡ್….!

Date:

ನಿನ್ನೆ ರಾಯಲ್ ಚಾಲೆಂಜರ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಹಣಾಹಣಿಗೆ ಬೆಂಗಳೂರಿನ ಚಿನ್ನ ಸ್ವಾಮಿ ಕ್ರೀಡಾಂಗಣ ಸಾಕ್ಷಿಯಾಗಿತ್ತು.
ಆರ್ ಸಿ ಬಿ‌ ಗೆದ್ದೇ ಗೆಲ್ಲುತ್ತೆ ಎಂಬ ಆಸೆಯೊಂದಿಗೆ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆದಿದ್ದರು.
ಟಾಸ್ ಗೆದ್ದ ಕೆಕೆಆರ್ ನಾಯಕ ದಿನೇಶ್ ಕಾರ್ತಿಕ್ ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿಯನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು.
ಮೊದಲು ಆರ್ ಸಿಬಿ ಬ್ಯಾಟಿಂಗ್… ಸಿಕ್ಸರ್, ಬೌಂಡರಿಗಳ ಸುರಿಮಳೆ ಗ್ಯಾರೆಂಟಿ ಅಂತ ಅಭಿಮಾನಿಗಳು ಕಾದಿದ್ರು. ಆದರೆ ಎ ಬಿ ಡಿವಿಲಿಯರ್ಸ್ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ ಎಂಬ ಸುದ್ದಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು.


ಅನಾರೋಗ್ಯ ಕಾರಣದಿಂದ ಎ ಬಿ ಡಿ ಬರ್ಲಿಲ್ಲ ಎಂದು ಬೇಜಾರಲಿದ್ದ ಅಭಿಮಾನಿಗಳಿಗೆ ದ್ರಾವಿಡ್ ಖುಷಿಕೊಟ್ರು.


ಹೌದು, ನಿನ್ನೆ ನಡೆದ ಪಂದ್ಯದಲ್ಲಿ ಎ ಬಿ ಡಿವಿಲಿಯರ್ಸ್ ಅಲಭ್ಯರಾಗಿದ್ರು. ಇದರಿಂದ ಅಭಿಮಾನಿಗಳಿಗೆ ಬೇಜಾರಿತ್ತು. ಆದರೆ , ಹೆಮ್ಮೆಯ ಕನ್ನಡಿಗ , ವಿಶ್ವಶ್ರೇಷ್ಠ ಕ್ರಿಕೆಟಿಗ, ಭಾರತ ಕಿರಿಯರ ತಂಡದ ಗುರು ರಾಹುಲ್ ದ್ರಾವಿಡ್ ನಿನ್ನೆಯ ಪಂದ್ಯ ವೀಕ್ಷಿಸಲು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದರು. ಅವರನ್ನು ‌ಕಂಡ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇರಲಿಲ್ಲ.‌ದ್ರಾವಿಡ್ ಅವರನ್ನು ನೋಡುತ್ತಿದ್ದಂತೆ ಸಂಭ್ರಮದ ಕೂಗು‌ ಮುಗಿಲುಮುಟ್ಟಿತ್ತು.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...