ದ್ರಾವಿಡ್ ಗೆ ದ್ರೋಣಾಚಾರ್ಯ ಪ್ರಶಸ್ತಿ ಯಾಕೆ….? ಹೀಗಂತ ಪ್ರಶ್ನಿಸಿದ ಮಹಾನುಭಾವರು ಯಾರ್ ಗೊತ್ತಾ….?

Date:

ರಾಹುಲ್ ದ್ರಾವಿಡ್ ವಿಶ್ವಕ್ರಿಕೆಟ್ ಕಂಡ ಅತ್ಯಂತ ಹೆಮ್ಮೆಯ , ಶ್ರೇಷ್ಠ ಕ್ರಿಕೆಟಿಗ. ಕ್ರಿಕೆಟ್ ಜೆಂಟಲ್ಮೆನ್ ಕ್ರೀಡೆ ಎಂಬುದು ನಿಜವೇ ಎಂಬ ಪ್ರಶ್ನೆ ಎದುರಾದಗಲೆಲ್ಲಾ…? ಖಂಡಿತ ಇದೊಂದು ಜೆಂಟಲ್ಮೆನ್ ಕ್ರೀಡೆ ಅಂತ ನೆನಪಿಸುವುದು ಇದೇ ಜೆಂಟಲ್ಮೆನ್ ದ್ರಾವಿಡ್.
ಭಾರತ ಕ್ರಿಕೆಟ್ ಮಾತ್ರವಲ್ಲ ಇಡೀ ವಿಶ್ವ ಕ್ರಿಕೆಟ್ ಗೆ ದ್ರಾವಿಡ್ ನೀಡಿರುವ, ನಿವೃತ್ತಿ ಬಳಿಕವೂ ಅವರು ನೀಡುತ್ತಿರುವ ಕೊಡುಗೆ ಅಪಾರ.


ದ್ರಾವಿಡ್ ನಿವೃತ್ತಿ ಘೋಷಿಸಿ ವರ್ಷಗಳೇ ಉರುಳಿವೆ. ಆದರೆ ಅವರು ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗೂ ಚಿರಪರಿಚಿತ‌..ಎಲ್ಲರ ಮನದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ಗುರುವಾಗಿ ಭಾರತಕ್ಕೆ ಅಂಡರ್ 19 ವಿಶ್ವಕಪ್ ತಂದುಕೊಡುವಲ್ಲಿ ಇವರ ಪಾತ್ರ ಹಿರಿಯದು. ಹೀಗಾಗಿ ಸುಪ್ರೀಂ ಕೋರ್ಟ್ ನೇಮಿಸಿರುವ ಬಿಸಿಸಿಐ ಆಡಳಿತ ಮಂಡಳಿ ರಾಹುಲ್ ದ್ರಾವಿಡ್ ಅವರ ಹೆಸರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ. ಈ ಬಗ್ಗೆ ನಿಮಗೆ ಗೊತ್ತಿದೆ.


ಆದರೆ, ಕೆಲವರು ದ್ರಾವಿಡ್ ಅವರಿಗೆ ದ್ರೋಣಾಚಾರ್ಯ ಪ್ರಶಸ್ತಿ ಯಾಕ್ರಿ? ಎಂದು ಪ್ರಶ್ನೆ ಮಾಡ್ತಿದ್ದಾರೆ.
ಕುಲದೀಪ್, ಬುಮ್ರಾ ರಂತೆ ಕೆಲವರು ವೈಯಕ್ತಿಕ ಕೋಚ್ ಗಳನ್ನು ನೇಮಿಸಿಕೊಂಡಿರ್ತಾರೆ.‌ ಆಟಗಾರರ ಮೇಲೆ ಅವರ ವೈಯಕ್ತಿಕ ಕೋಚ್ ಗಳ ಪ್ರಭಾವ ಹೆಚ್ಚು ಆದ್ದರಿಂದ ದ್ರಾವಿಡ್ ಅವರ ಹೆಸರನ್ನು ಶಿಫಾರಸು ಮಾಡಿರೋದು ತಪ್ಪು ಎಂದು ಬಿಸಿಸಿಐನ ಕೆಲವು ಅಧಿಕಾರಿಗಳು ಹೇಳಿದ್ದಾರೆ.

 

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...