ಫೇಸ್ ಬುಕ್ ಸ್ನೇಹ ಕೊಲೆಯಲ್ಲಿ ಕೊನೆ…!

Date:

ಫೇಸ್ ಬುಕ್ ನಲ್ಲಾದ ಸ್ನೇಹ ಕೊಲೆಯಲ್ಲಿ ಕೊನೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಜಕ್ಕಿನಕೊಪ್ಪದಲ್ಲಿ ನಡೆದಿದೆ.
ಸಂಜಯ್ ಕುಮಾರ್ ಮೃತ ದುರ್ದೈವಿ.
ಈತ ಕಾಳೇನಹಳ್ಳಿ ಗ್ರಾಮದಲ್ಲಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡ್ತಿದ್ದ. ಇದೇ ಗ್ರಾಮದಲ್ಲಿ ಕಲ್ಲು ಕ್ವಾರಿ ನಡೆಸುತ್ತಿದ್ದ ಹರೀಶ್ ಬಾಬು ಹೆಂಡ್ತಿ ಜೊತೆ ಸ್ನೇಹ ಬೆಳೆಸಿದ್ದನು. ಇದು ಹರೀಶ್ ಗೆ ಇಷ್ಟವಾಗಿರಲಿಲ್ಲ. ಈ ಬಗ್ಗೆ ಪತ್ನಿ ಜೊತೆ ಅನೇಕ ಬಾರಿ ಜಗಳವಾಗಿತ್ತು.
ಸಂಜಯ್ ನನ್ನು ಕ್ವಾರಿಗೆ ಕರೆಸಿಕೊಂಡಿದ್ದ ಹರೀಶ್ ಸ್ನೇಹಿತರ ಜೊತೆ ಸೇರಿ ಆತನನ್ನು ಕೊಂದಿದ್ದಾನೆ.


ಸಂಜಯ್ ನಾಪತ್ತೆ ಆಗಿದ್ದ ಹಿನ್ನೆಲೆಯಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಾಗ ಸತ್ಯಾಂಶ ಬಯಲಾಗಿದೆ.
ಶಿಕಾರಿಪುರ ಗ್ರಾಮಾಂತ ಠಾಣೆ ಪೊಲೀಸರು ಸಂಜಯ್ ಶವವನ್ನು ಹೊರತೆಗೆದಿದ್ದು ,ಹರೀಶ್ ಮತ್ತು ಆತನ ಸ್ನೇಹಿತರಾದ ಸುರೇಶ್ ಮತ್ತು ನರಸಿಂಹನನ್ನು ಪೊಲೀಸರು ಬಂಧಿಸಿದ್ದರು.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...