ಗೌರಿ-ಗಣೇಶ ಹಬ್ಬದೊಳಗೆ ರೈತರಿಗೆ ಸಿಹಿ ಸುದ್ದಿ ಕೊಡ್ತಾರಂತೆ ಸಿಎಂ

Date:

ರೈತರ ಋಣ ತೀರಿಸಲು ನಾನು ಸದಾ ಬದ್ಧನಾಗಿರುತ್ತೇನೆ. ಗೌರಿ-ಗಣೇಶ ಹಬ್ಬದೊಳಗೆ ನಾಡಿನ ಆರುವರೆ ಕೋಟಿ ಜನರಿಗೂ ಸಿಹಿ ಸುದ್ದಿ ನೀಡ್ತೀನಿ ಎಂದು ಮುಖ್ಯಮಂತ್ರಿ ಎಚ್ .ಡಿ ಕುಮಾರ ಸ್ವಾಮಿ ಹೇಳಿದ್ದಾರೆ.ಮಂಡ್ಯದ ಸೀತಾಪುರದಲ್ಲಿ ಭತ್ತ ನಾಟಿ ಮಾಡಿ ಮಾತನಾಡಿದ ಅವರು, ನಾನು ಸಹ ರೈತ ಕುಟುಂಬದಲ್ಲೇ ಹುಟ್ಟಿದವನು. ನಾಟಿ ಮಾಡುವುದು ನಂಗೆ ಹೊಸತಲ್ಲ. ಇದನ್ನು ರಾಜಕೀಯವಾಗಿ ತೆಗೆದುಕೊಂಡರೆ ನಾನೇನು ಮಾಡಲಾಗಲ್ಲ ಎಂದರು.

ರಾಜ್ಯದ 30 ಜಿಲ್ಲೆಗಳನ್ನು ದತ್ತು ತೆಗೆದುಕೊಂಡು ನಾನು ಕೆಲಸ ಮಾಡುತ್ತೇನೆ.ರೈತರನ್ನು ಉಳಿಸಿಕೊಳ್ಳುವುದು ನನ್ನ ಕರ್ತವ್ಯ, ರೈತರ ಸಮಸ್ಯೆಗೆ ವಿಧಾನಸೌಧದ ಬಾಗಿಲು ಸದಾ ತೆರೆದಿರುತ್ತದೆ, ನಾನು ನಿಮ್ಮ ನಿರೀಕ್ಷೆಗೂ ಮೀರಿ ಕೆಲಸ ಮಾಡುತ್ತೇನೆ, ಮಂಡ್ಯ ಜಿಲ್ಲೆ ರೈತರ ಋಣ ನನ್ನ ಮೇಲೆ ಅಪಾರವಾಗಿದೆ, ಜಿಲ್ಲೆಯ 7 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಿಸಿದ್ದೀರಿ, ಏಳೇಳು ಜನ್ಮಕ್ಕೂ ಮಂಡ್ಯದ ಜನರ ಋಣ ತೀರಿಸಲಾಗದು, ಮಂಡ್ಯದ ಅಭಿವೃದ್ಧಿಯಾಗಬೇಕು ಎಂಬುದು ನನ್ನ ಬಯಕೆ ಎಂದರು‌

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...