No menu items!
26.3 C
Munich
Thursday, June 18, 2026

ಕೆಎಸ್ಆರ್ ಟಿಸಿ ಅಂಬಾರಿ ಬೆಂಕಿಗಾಹುತಿ

Must read

ಕೆಎಸ್ ಆರ್ ಟಿಸಿ ಅಂಬಾರಿ ಬಸ್ ಬೆಂಕಿಗಾಹುತಿ ಆಗಿದ್ದು, ಚಾಲಕನ ಜಾಗರೂಕತೆಯಿಂದಾಗಿ ಸಂಭವಿಸಬಹುದಿದ್ದ ಭಾರಿ ಅನಾಹುತವೊಂದು ತಪ್ಪಿದೆ. ಬೆಂಗಳೂರಿನ ಕೆ.ಆರ್ ಪುರ ಬಳಿಯ ಐಟಿಐ ತೂಗು ಸೇತುವೆ ಮೇಲೆ ಈ ಘಟನೆ ನಡೆದಿದೆ. ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಇದಾಗಿತ್ತು. ಇಂಜಿನ್ ನಲ್ಲಿ ಕೆಟ್ಟು, ಬೆಂಕಿ ಹೊತ್ತಿಕೊಂಡಿದೆ. ಬಸ್ ನ ಹಿಂಬದಿಯಲ್ಲಿ ಹೊಗೆಯಾಡುತ್ತಿರುವುದನ್ನು ಕಂಡು ಚಾಲಕ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಘಟನೆ ನಡೆದಿದ್ದು ಬೆಳಗ್ಗಿನ ಜಾವ 5.30ರ ಸುಮಾರಿಗೆ.

ಈ ವೇಳೆ 20 ಮಂದಿ ಪ್ರಯಾಣಿಕರು ಬಸ್ ನಲ್ಲಿದ್ದರಯ. ಕೆ. ಆರ್ ಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article