ತಿಲಕ್ ಶೇಖರ್ ಮತ್ತು ಮೇಘನಾ ರಾಜ್ ಅಭಿನಯದ ‘ಇರುವುದೆಲ್ಲವ ಬಿಟ್ಟು’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ, ಈಗಾಗಲೇ ಸದ್ದು ಮಾಡುತ್ತಿದೆ.
ಈ ಸಿನಿಮಾದ ಟ್ರೇಲರ್ ನೋಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಚ್ಚುಗೆಯ ನುಡಿಗಳನ್ನಾಡಿದ್ದಾರೆ.
ಕಾಂತಕನ್ನಲ್ಲಿ ನಿರ್ದೇಶನದ ಈ ಚಿತ್ರಕ್ಕೆ ಬಂಡವಾಳ ಹಾಕಿರುವವರು ದಾವಣಗೆರೆ ದೇವರಾಜ್. ಜಯಂತ್ ಕಾಯ್ಕಿಣಿ, ವಿ. ನಾಗೇಂದ್ರ ಪ್ರಸಾದ್ , ಕವಿರಾಜ್, ಕಾಂತಕನ್ನಲ್ಲಿ ಸಾಹಿತ್ಯವಿದ್ದು, ಶ್ರೀಧರ್ ಸಂಭ್ರಮ್ ಅವರ ಸಂಗೀತದ ಬಲ ಚಿತ್ರಕ್ಕಿದೆ..
ತಿಲಕ್ , ಮೇಘಾ ಅವರಲ್ಲದೆ ಶ್ರೀ ಮಹದೇವ್, ಅಚ್ಯುತ್ ಕುಮಾರ್, ಅರುಣ ಬಾಲರಾಜ್, ಅಭಿಷೇಕ್, ರಾಯಣ್ಣ, ರಿಚರ್ಡ್ ಲೂಯಿಸ್ ಮತ್ತಿತರರು ತಾರಾಗಣದಲ್ಲಿದ್ದಾರೆ.
ಇರುವುದೆಲ್ಲವ ಬಿಟ್ಟು ಸಿನಿಮಾ ಹಾಗೂ ನಾಯಕ ನಟ ತಿಲಕ್ ಬಗ್ಗೆ ದರ್ಶನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ದರ್ಶನ್ ಏನೇಳಿದ್ದಾರೆ? ವೀಡಿಯೋ ನೋಡಿ…