ದುನಿಯಾ ವಿಜಯ್ ಮುಂದೇನ್​ ಮಾಡ್ತಾರೆ..?

Date:

 

ಪಾನಿಪೂರಿ ಕಿಟ್ಟಿಯ ಅಣ್ಣನ ಮಗ ಮಾರುತಿ ಗೌಡನ ಮೇಲಿನ ಹಲ್ಲೆ ಪ್ರಕರಣ ದುನಿಯಾ ವಿಜಿಗೆ ಜೈಲಿನ ದರ್ಶನ ಮಾಡಿಸಿತ್ತು. ಕೊನೆಗೆ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಅವರು, 1 ಲಕ್ಷ ರುಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದ್ದಾರೆ. ಅಲ್ಲದೆ ತನಿಖೆಗೆ ಸಹಕರಿಸುವಂತೆ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಸದ್ಯ ದುನಿಯಾ ವಿಜಯ್​ ನಿರಾಳ. ಆದ್ರೆ ಮುಂದೇನ್​ ಮಾಡ್ತಾರೆ..?
ವಿಜಯ್​ ಸುಖಾಸುಮ್ನೇ ಏನೋ ಮಾಡೋಕೆ ಹೋಗಿ ಇನ್ನೇನೋ ಮಾಡಿಕೊಂಡಿದ್ರು. ನಿಜ ಹೇಳಬೇಕು ಅಂದ್ರೆ, ವಿಜಯ್​ ಸಿಕ್ಕಾಪಟ್ಟೆ ಬ್ಯುಸಿ ಶೆಡ್ಯೂಲ್​ನಲ್ಲಿದ್ದವರು. ಅವರ ಅಪ್​ಕಮಿಂಗ್​ ಕುಸ್ತಿ ಸಿನಿಮಾ ಶೂಟಿಂಗ್​ ನಡೀತಾ ಇತ್ತು. ಕೋಬ್ರಾ ಚಿತ್ರದ ಕಥೆ ರೆಡಿ ಆಗ್ತಾ ಇದೆ. ಇದರ ಜೊತೆಗೆ ಮೊದಲ ಪತ್ನಿ ನಾಗರತ್ನ ಹಾಗೂ ಇತ್ತೀಚೆಗಷ್ಟೇ ವಿವಾಹವಾದ ಕೀರ್ತಿಯ ಜಡೆ ಜಗಳವೂ ಜೋರಾಗಿದೆ. ಇದೆಲ್ಲದರ ಜೊತೆಗೆ ಮಾರುತಿ ಗೌಡನ ಮೇಲಿನ ಹಲ್ಲೆ ಪ್ರಕರಣ ಸೇರ್ಪಡೆಯಾಗಿದೆ.
ಹೀಗಿರುವಾಗ ದುನಿಯಾ ವಿಜಯ್​ ತಮ್ಮ ಚಿತ್ರಗಳ ಬಗ್ಗೆ ಗಮನ ಹರಿಸುತ್ತಾರೋ..? ಪತ್ನಿಯರ ಗಲಾಟೆ ಬಗೆಹರಿಸುತ್ತಾರೋ..? ಅಥವಾ ಪಾನಿಪುರಿ ಕಿಟ್ಟಿ ಜೊತೆಗಿನ ಗಲಾಟೆಯನ್ನ ಬಗೆಹರಿಸಿಕೊಳ್ತಾರೋ ಅನ್ನೋ ಪ್ರಶ್ನೆ ಅಭಿಮಾನಿಗಳನ್ನ ಕಾಡುತ್ತಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...