ಕಾಣೆ ಆದ ಹುಡುಗ ಸಿಕ್ಕಿದ್ದು ಹೆಣ್ಣಾಗಿ..!

Date:

ಬೆಂಗಳೂರಿನಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಕಾಣೆಯಾಗಿ 8 ತಿಂಗಳಾದ ಮೇಲೆ ಮಂಗಳಮುಖಿ ಆಗಿ ಸಿಕ್ಕಿದ್ದಾನೆ
ಮಂಡ್ಯದ ಕೆಆರ್ ಪೇಟೆ ತಾಲೂಕಿನ ಹಳ್ಳಿಯೊಂದರ ಬಾಲಕ ಬೆಂಗಳೂರಿನ ಚಿಕ್ಕಮ್ಮನ ಮನೆಯಲ್ಲಿದ್ದುಕೊಂಡು 10ನೇ ತರಗತಿ ಓದುತ್ತಿದ್ದ. ಶಾಲೆಗೆ ರಜೆ ಇದ್ದಿದ್ದರಿಂದ 8 ತಿಂಗಳ ಹಿಂದೆ ಊರಿಗೆ ಹೋಗಿದ್ದ ಪೋಷಕರು, ಸಂಬಂಧಿಕರು, ಬಾಲ್ಯದ ಸ್ನೇಹಿತರೊಂದಿಗೆ ಕಾಲ ಕಳೆದಿದ್ದ. ರಜೆ ಮುಗಿಸಿ, ಬೆಂಗಳೂರಿಗೆ ಹೋಗುದಾಗಿ ಹೇಳಿ ಹೋಗಿದ್ದ ಬಾಲಕ ನಾಪತ್ತೆಯಾಗಿದ್ದ.

ಬಾಲಕ ನಾಪತ್ತೆಯಾಗಿದ್ದರಿಂದ ಪೋಷಕರು, ಕೆಆರ್ ಪೇಟೆ ಪಟ್ಟಣದ ಠಾಣೆಗೆ ಪೋಷಕರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಬಾಲಕನ ಪತ್ತೆಗಾಗಿ ಹುಡುಕಾಟ ನಡೆಸಿದ್ದರು. ಸುಮಾರು ದಿನಗಳು ಕಳೆದರೂ ಬಾಲಕ ಸಿಗದಿದ್ದರಿಂದ ಪೋಷಕರು ಆತಂಕದಲ್ಲಿಯೇ ಕಾಲ ಕಳೆಯುತ್ತಿದ್ದರು.

ಬಾಲಕನ ಗ್ರಾಮದ ಮಂಜು ಎಂಬವರು ಎಳೆನೀರು ಮಾರಾಟಕ್ಕೆ ಕೆಆರ್ ಪೇಟೆಯ ಸಂತೆಗೆ ಬಂದಿದ್ದಾಗ . ಈ ವೇಳೆ ಬಾಲಕ ಮಂಗಳಮುಖಿಯರ ಜೊತೆಗೆ ಅಂಗಡಿಗಳಲ್ಲಿ ಕಲೆಕ್ಷನ್ ಮಾಡುತ್ತಿರುವುದನ್ನು ಮಂಜು ನೋಡಿದ್ದಾರೆ. ಬಾಲಕನನ್ನು ಹಿಡಿಯಲು ಗ್ರಾಮಸ್ಥರು ಸೇರುತ್ತಿದ್ದಂತೆ, ಬಾಲಕ ಹಾಗೂ ಮಂಗಳಮುಖಿಯರು ಆಟೋದಲ್ಲಿ ಹತ್ತಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ತಕ್ಷಣವೇ ಗ್ರಾಮಸ್ಥರೊಬ್ಬರು ತಮ್ಮ ಬೈಕ್ ಏರಿ, ಆಟೋವನ್ನು ಹಿಂಬಾಲಿಸಿ ಹೊಸ ಕಿಕ್ಕೇರಿ ರಸ್ತೆಯಲ್ಲಿ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ಬಳಿಕ ಕೆಆರ್ ಪೇಟೆ ನಗರ ಠಾಣೆಗೆ ಬಾಲಕ ಹಾಗೂ ಮಂಗಳಮುಖಿಯರನ್ನು ಕರೆತಂದಿದ್ದಾರೆ.

ಬಾಲಕನನ್ನು ತೃತೀಯ ಲಿಂಗಿಯಾಗಿ ಬದಲಾವಣೆ ಮಾಡಿರುವುದು ಬೆಳಕಿಗೆ ಬಂದಿದೆ. ಹಣ ವಸೂಲಿ ಮಾಡಲು ಬಾಲಕನನ್ನು ಕೆಲ ಮಂಗಳಮುಖಿಯರು ಬಳಸಿಕೊಳ್ಳುತ್ತಿದ್ದಾರೆ. ಈ ಕುರಿತು ವ್ಯಾಪಕ ತನಿಖೆ ನಡೆಸಿ, ಸತ್ಯ ಬಯಲಿಗೆಳೆಬೇಕು. ಮುಂದಿನ ದಿನಗಳಲ್ಲಿ ಅಪ್ರಾಪ್ತ ಬಾಲಕರು ಇಂತಹ ಕೃತ್ಯಕ್ಕೆ ಬಲಿಯಾಗದಂತೆ ತಡೆಯಬೇಕು ಎಂದು ಬಾಲಕನ ಪೋಷಕರ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತೃತೀಯ ಲಿಂಗಿಯಾಗಿ ಬದಲಾದ ಬಾಲಕನೊಂದಿಗೆ ಮೂವರು ತೃತೀಯ ಲಿಂಗಿಗಳು ಪೊಲೀಸರ ವಶದಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...