ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರದ ಬದಲಾಗಿ ಮಸೀದಿ ಚಿತ್ರ..!
ಜುಲಸ್ ಇ ಗೌಸಿಯಾ ಕಾರ್ಯಕ್ರಮ ಹಮ್ಮಿಕೊಂಡಿದ್ದ ಮುಸ್ಲಿಮ್ ಸಮುದಾಯ ಈ ಸಂದರ್ಭದಲ್ಲಿ ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರದ ಬದಲಿಗೆ ಮಸೀದಿ ಫೋಟೊ ಹಾಕಿದೆಯಂತೆ.. ಹೀಗೆಂದು ಜಾಗರಣ್ ಮಂಚ್ ಮತ್ತು ಅಖಿಲ ಭಾರತೀಯ ಹಿಂದೂ ಮಹಾಸಭಾ ನೀಡಿದ ದೂರಿನ ಮೇರೆಗೆ ತನಿಖೆಗೆ ಆದೇಶಿಲಾಗಿದೆ..
ಉತ್ತರಪ್ರದೇಶದ ಶಹಜಹಾನ್ ಪುರದಲ್ಲುನ ಪುರಾಣ್ ನಗರದಲ್ಲಿ ಈ ಘಟನೆ ನಡೆದಿದೆ.. ಕಾರ್ಯಕ್ರಮದ ವೇಳೆ ತ್ರಿವರ್ಣ ಧ್ವಜದಲ್ಲಿ ಅಶೋಕ ಚಕ್ರದ ಬದಲಿಗೆ ಮಸೀದಿ ಫೋಟೊ ಹಾಕಲಾಗಿತ್ತು.. ಇದು ದೇಶದ ಧ್ವಜಕ್ಕೆ ಅಪಮಾನ ಮಾಡಿದಂತೆ ಎಂದು ಹಿಂದು ಸಂಘಟನೆಗಳು ಆರೋಪ ಮಾಡಿವೆ.. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದ್ದು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ ಪಿ ಬಲೆಂದು ಭೂಷಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.