ನಡೆದಾಡುವ ದೇವರ ಹುಟ್ಟೂರನ್ನ ದತ್ತು ಪಡೆಯಲ್ಲಿದ್ದಾರೆ ಸಚಿವ ಡಿ.ಕೆ.ಶಿವಕುಮಾರ್..

Date:

ನಡೆದಾಡುವ ದೇವರ ಹುಟ್ಟೂರನ್ನ ದತ್ತು ಪಡೆಯಲ್ಲಿದ್ದಾರೆ ಸಚಿವ ಡಿ.ಕೆ.ಶಿವಕುಮಾರ್..

ಶಿವೈಕ್ಯರಾದ ಶ್ರೀಗಳ ಅಂತ್ಯ ಸಂಸ್ಕಾರ ಇಂದು ಸಂಜೆ 5 ಗಂಟೆ ಸುಮಾರಿಗೆ ಮಠದಲ್ಲಿ ನಡೆಯಲಿದೆ.. ನಿನ್ನೆಯಿಂದಲು ಭಕ್ತಸಾಗರ ತುಮಕೂರು ಶ್ರೀ ಸಿದ್ದಗಂಗಾ ಮಠದ ಕಡೆ ಆಗಮಿಸುತ್ತಿದ್ದು, ಅಗಲಿದ ನಡೆದಾಡುವ ದೇವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.. ಇತ್ತಕಡೆ ಶ್ರೀಗಳ ಹುಟ್ಟೂರು ವೀರಾಪುರದಲ್ಲಿ ನೀರವ ಮೌನ ಆವರಿಸಿದೆ.. ಶ್ರೀಗಳಲ್ಲಿದ್ದ ಇಡೀ ಗ್ರಾಮಕ್ಕೆ ಅನಾಥ ಭಾವ ಕಾಡುತ್ತಿದೆ…

ಸದ್ಯ ಶ್ರೀಗಳ‌ ಜನ್ಮಸ್ಥಳವಾದ ಈ ಹಳ್ಳಿಯಲ್ಲಿ ಸುಮಾರು 50 ಮನೆಗಳಿವೆ ಎಂದು ಹೇಳಲಾಗುತ್ತಿದೆ.. ಮೂಲಸೌಕರ್ಯ ಕೊರತೆ ಇರುವ ಈ ಹಳ್ಳಿ ಅಭಿವೃದ್ಧಿಯಾಗಬೇಕಿದೆ..‌ ಶುದ್ದ ಕುಡಿಯುವ ನೀರು, ರಸ್ತೆ, ಒಳಚರಂಡಿ ಸೇರಿದಂತೆ ಮೂಲಸೌಕರ್ಯಗಳನ್ನ ಮಾಡಬೇಕಿದೆ.. ಹೀಗಾಗೆ ಸಚಿವರಾದ ಡಿ.ಕೆ.ಶಿವಕುಮಾರ್ ಈ ಹಳ್ಳಿಯನ್ನ ದತ್ತು ಪಡೆಯುವುದಾಗಿ ತಿಳಿಸಿದ್ದಾರೆ…

ತಾವೇ ದತ್ತು ಪಡೆದು ಇಡೀ ಗ್ರಾಮದ ಅಭಿವೃದ್ಧಿ ಮಾಡುವುದಾಗಿ ಹೇಳಿದ್ದಾರೆ.. ಡಿ.ಕೆ.ಶಿವಕುಮಾರ್ ಅವರು ಶ್ರೀಗಳ ಭಕ್ತರಾಗಿದ್ದು, ಹಲವು ಬಾರಿ ಅವರನ್ನ ಭೇಟಿ ಮಾಡಿದ್ದಾರೆ.. ರಾಮನಗರ ವ್ಯಾಪ್ತಿಗೆ ಒಳ ಪಡುವ ಈ ಗ್ರಾಮವನ್ನ ಅವರ ನೆನಪಿಗಾಗಿ ಅಭಿವೃದ್ಧಿ ಪಡಿಸಿ ಮಾದರಿ ಗ್ರಾಮವನ್ನಾಗಿಸುವ ಆಸೆಯನ್ನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ..

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...