ಮೋದಿ ಪರವಾಗಿ ಬಗ್ಗೆ ಮಾತನಾಡಿದ್ದೇ ಕಂಟಕವಾಯ್ತ ಶ್ರೀಗಳಿಗೆ..! ಸ್ವಾಮಿಗಳಿಗೂ ಬಿಡದ ಚುನಾವಣಾ ಆಯೋಗ..!

Date:

ಅರಸೀಕೆರೆ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ರಾಜೇಂದ್ರ ಸ್ವಾಮೀಜಿಯವರಿಗೆ ಚುನಾವಣಾ ಆಯೋಗ ನೊಟೀಸ್ ನೀಡಿದೆ. ಕೆಲವು ದಿನಗಳ ಹಿಂದೆ ಪ್ರಧಾನಿಯಾಗಿ ನರೇಂದ್ರ ಮೋದಿಯವರೇ ಮುಂದುವರಿಯಲಿದ್ದಾರೆಂದು ಪರೋಕ್ಷವಾಗಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು. ಈ ಕಾರಣಕ್ಕಾಗಿ ಶ್ರೀಗಳಿಗೆ ನೊಟೀಸ್ ಜಾರಿ ಮಾಡಲಾಗಿದೆ. ಶ್ರೀಗಳು ನುಡಿಯುವ ಭವಿಷ್ಯ ಮತದಾರನ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ನೊಟೀಸ್ ಜಾರಿ ಮಾಡಿರುವುದಾಗಿ ಚುನಾವಣಾ ಅಧಿಕಾರಿ ಶಂಕರಗೌಡ ಅವರು ಹೇಳಿದ್ದಾರೆ.

ನೀತಿಸಂಹಿತೆ ಜಾರಿಯಲ್ಲಿದೆ, ಆದರೂ ನೀವು ಚುನಾವಣಾ ಕಾನೂನು ಉಲ್ಲಂಘಿಸಿದ್ದೀರಿ, 48 ಗಂಟೆಯೊಳಗಾಗಿ ನೊಟೀಸ್ ಗೆ ಉತ್ತರ ನೀಡುವಂತೆ ಶ್ರೀಗಳಿಗೆ ಸೂಚಿಸಲಾಗಿದೆ ಎಂದು ಶಂಕರಗೌಡ ಹೇಳಿದ್ದಾರೆ. ಯಾದಗಿರಿಯಲ್ಲಿ ಶ್ರೀ ವಿಶ್ವಾರಾಧ್ಯರ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಕೋಡಿಶ್ರೀಗಳು, “ಪಾಂಡವರು ಮತ್ತು ಕೌರವರು ಬಡಿದಾಡುವರು, ರತ್ನಖಚಿತ ಸುವರ್ಣ ಕಿರೀಟ ಸ್ಥಿರವಾಗಿರುತ್ತದೆ. ಬೇವು ಬೆಲ್ಲವಾದೀತು, ಸತ್ಯ ವಿಷದಂತೆ ಇರುತ್ತದೆ” ಎನ್ನುವ ಭವಿಷ್ಯವನ್ನು ಶ್ರೀಗಳು ನುಡಿದಿದ್ದರು. ಕಾಲಜ್ಞಾನ ಬ್ರಹ್ಮ ಸದ್ಗುರು ಸ್ವಾಮೀಜಿ ನುಡಿದ ಪ್ರಧಾನಿ ಮೋದಿಯ ಭವಿಷ್ಯ ರತ್ನಖಚಿತ ಸುವರ್ಣ ಕಿರೀಟ ಎನ್ನುವುದು ಪ್ರಧಾನಮಂತ್ರಿ ಹುದ್ದೆ, ಸ್ಥಿರವಾಗಿರುತ್ತದೆ ಎಂದರೆ

ಮತ್ತೆ ನರೇಂದ್ರ ಮೋದಿಯವರೇ ಪ್ರಧಾನಿ ಎಂದು ಕೋಡಿಶ್ರೀಗಳ ಭವಿಷ್ಯವನ್ನು ವ್ಯಾಖ್ಯಾನಿಸಲಾಗಿತ್ತು.

 

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...