ಕಾಂಗ್ರೆಸ್ ಗೆ ಚುನಾವಣಾ ಸಮಯದಲ್ಲಿ ದೊಡ್ಡ ಆಘಾತ..! ಕಾಂಗ್ರೆಸ್ ನ ಪ್ರಭಾವಿ ಸಚಿವ ಇನ್ನಿಲ್ಲ..!?

Date:

ಧಾರವಾಡ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಭಂಧಿಸಿದಂತೆ ಅಲ್ಲಿಯೇ ಇದ್ದು ತಾವೇ ಸ್ವತಃ ಉಸ್ತುವಾರಿಯನ್ನು ವಹಿಸಿಕೊಳ್ಳುವುದರ ಮೂಲಕ ಸಂಕಷ್ಟದಲ್ಲಿದ್ದ ಜನರಿಗೆ ನೆರವಾಗಿದ್ದ ಸಚಿವ ಶಿವಳ್ಳಿಯವರು ಇಂದು ಮಧ್ಯಾನ ಸುಮಾರು ೨ ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾರೆ.
ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ಅವರು ತೀವ್ರ ಹೃದಯಾಘಾತದಿಂದ ಬಳಲಿದ್ದರ ಪರಿಣಾಮವಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯನ್ನ ಕೊಡಿಸಲಾಗುತ್ತಿತ್ತು, ಆದರೆ ತೀವ್ರ ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಧಾರವಾಡ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ಕಾರ್ಯಾಚರಣೆ ನಡೆದ ಸ್ಥಳದಲ್ಲೇ ಕಳೆದ ಎರಡು ದಿನಗಳಿಂದ ಹಾಜರಿದ್ದು ಎಲ್ಲಾ ಕಾರ್ಯದ ಉಸ್ತುವಾರಿಯನ್ನು ಶಿವಳ್ಳಿಯವರೇ ನೋಡಿಕೊಳ್ಳುತ್ತಿದ್ದರು ಗುರುವಾರ ಸಿಎಂ ಕುಮಾರಸ್ವಾಮಿ ಅವರು ಆಗಮಿಸಿದ್ದ ವೇಳೆಯೂ ಸಿಎಂ ಅವರೊಂದಿಗೆ ಇದ್ದು ಈ ಎಲ್ಲ ವಿವರಗಳನ್ನೂ ಸಹ ಕುಮಾರಸ್ವಾಮಿಯವರಿಗೆ ನೀಡಿದ್ದರು ಎಂದು ತಿಳಿದು ಬಂದಿದೆ, ಕಳೆದ 2 ದಿನಗಳಿಂದ ಕಟ್ಟಡ ಕುಸಿತ ಸ್ಥಳದಲ್ಲೇ ಹೆಚ್ಚಿನ ಸಮಯ ಇದ್ದ ಅವರು ಬಳಲಿದ್ದ ಪರಿಣಾಮ ಕಿಮ್ಸ್ ಆಸ್ಪತ್ರೆಯ ವೈದ್ಯರು ಬಳಿ ಚಿಕಿತ್ಸೆ ಪಡೆದಿದ್ದರು.

ಆ ಬಳಿಕ ಸಚಿವರು ಮತ್ತೆ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆಯಲು ಆಗಮಿಸಿದ್ದರು. ಆದರೆ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತ ಸಂಭವಿಸಿದ್ದರ ಪರಿಣಾಮ ಸಾವನ್ನಪ್ಪಿದ್ದಾರೆ.

 

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...