ಮಂಡ್ಯದಲ್ಲಿ ಮತ್ತೆ ದರ್ಶನ್ ಹವಾ ! ಸುಮಲತಾ ಪರ ಭರ್ಜರಿ ಪ್ರಚಾರ .

Date:

ಪ್ರತ್ಯಾರೋಪಗಳಲ್ಲಿ ತೊಡಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಇದೀಗ ಪ್ರಚಾರದ ರಂಗು ಪಡೆದುಕೊಂಡಿದೆ. ಇಂದು ಚಾಲೆಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಜಿಲ್ಲೆಯ ಕೆಆರ್‍ಎಸ್ ಸೇರಿದಂತೆ ವಿವಿಧೆಡೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಭರ್ಜರಿ ರೋಡ್‍ಶೋ ನಡೆಸಿ ಪ್ರಚಾರ ಮಾಡಿದರು.

ಯಾವುದೇ ಕಾರಣಕ್ಕೂ ಮತದಾರರು ಗೊಂದಲಕ್ಕೀಡಾಗಬಾರದು. ಸುಮಲತಾ ಎ. ಕ್ರಮ ಸಂಖ್ಯೆ 20 ಇದಕ್ಕೆ ಮತದಾನ ಮಾಡುವ ಮೂಲಕ ಅಕ್ಕ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ದರ್ಶನ್ ಪ್ರಚಾರದ ವೇಳೆ ಸಾವಿರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಪಾಲ್ಗೊಂಡಿದ್ದರು. ಎಲ್ಲೆಲ್ಲೂ ಸುಮಲತಾ ಹಾಗೂ ದರ್ಶನ ಪರ ಘೋಷಣೆಗಳು ಮೊಳಗಿದವು.

ಯಾರೂ ಆಮಿಷಗಳಿಗೆ ಒಳಗಾಗಬಾರದು, ಪ್ರಾಮಾಣಿಕವಾಗಿ ಮತದಾನ ಮಾಡಬೇಕು.ಅರ್ಹರನ್ನು ಆರಿಸಬೇಕು. ತಮ್ಮದೇ ಮತದಾನ ಮಾಡಿ ಹಕ್ಕು ಚಲಾಯಿಸಿ ಎಂದು ದಚ್ಚು ಇದೇ ವೇಳೆ ಸಲಹೆ ನೀಡಿದರು. ಯಾರ್ಯಾರೋ ಏನೇನೋ ಮಾತನಾಡುತ್ತಾರೆ.

ಅದಕ್ಕೆಲ್ಲಾ ಮತದಾರರು ತಲೆಕೆಡಿಸಿಕೊಳ್ಳಬಾರದು. ಕ್ಷೇತ್ರದಲ್ಲಿ ಸುಮಲತಾ ಹೆಸರಿನ ಕೆಲವರು ಸ್ಪರ್ಧಿಸಿದ್ದಾರೆ. ಹಾಗಾಗಿ ಗೊಂದಲ ಮಾಡಿಕೊಳ್ಳದೆ ಸುಮಲತಾ ಎ. ಕ್ರಮ ಸಂಖ್ಯೆ 20ಕ್ಕೆ ನಿಮ್ಮ ಮತ ನೀಡಿ ನ್ಯಾಯವನ್ನು ಎತ್ತಿಹಿಡಿಯಬೇಕೆಂದು ದರ್ಶನ್ ಇದೇ ವೇಳೆ ಮನವಿ ಮಾಡಿದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...