ಕಿರಿಕ್ ಚೆಲುವೆಗೆ ಅದೆಂಥಾ ಆಫರ್ ಬಂದಿದೆ ಗೊತ್ತಾ?

Date:

ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಬೆಡಗಿ ರಶ್ಮಿಕಾ ಮಂದಣ್ಣ ಅಂದ್ರೆ ಸಾಕು ಪಡ್ಡೆ ಹುಡುಗರಿಗೆ ಅದೇನೋ ಪುಳಕವಾಗುತ್ತೆ. ಕಿರಿಕ್ ಪಾರ್ಟಿ ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದ ಚೆಂದುಳ್ಳಿ ಚೆಲುವೆ ಈಕೆ. ಯಾವಾಗ ಕರ್ನಾಟಕದ ಕ್ರಶ್ ಆದ್ರೋ ಆಗ್ಲೇ ಟಾಲಿವುಡ್, ಕಾಲಿವುಡ್ , ಹಾಗೇ ಬಾಲಿವುಡ್ ಅಂಗಳಕ್ಕೂ ಕಾಲಿಡೋದ್ರಲ್ಲಿ ನೋ ಡೌಟ್ ಅಂತಾ ಗಾಸಿಪ್ಗಳು ಹರಿದಾಡಿದ್ವು. ಕಿರಿಕ್ ಪಾರ್ಟಿ ಚಿತ್ರದ ನಂತರ ಈಗಾಗ್ಲೇ ಬಹುಬಾಷ ಸಿನಿಮಾಗಳಿಗೆ ಕಾಲಿಟ್ಟು ಮಿಂಚು ಹರಿಸಿರೋ ರಶ್ಮಿಕಾ, ಬಾಲಿವುಡ್ಗೂ ಅಂಗಳಕ್ಕೂ ಕಾಲಿಡುವುದು ಕನ್ಫರ್ಮ್ ಎನ್ನಲಾಗ್ತಿದೆ. ಯಾಕಂದ್ರೆ ರಶ್ಮಿಕಾಗೆ ಈಗ ಬಾಲಿವುಡ್ನಲ್ಲೂ ನಟಿಸುವ ಅವಕಾಶ ಒದಗಿ ಬಂದಿದೆಯಂತೆ.

ಬಿಟೌನ್ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ನಟಿಸಲು ಆಫರ್ ಬಂದಿದೆ ಎನ್ನಲಾಗುತ್ತಿದೆ. ರಶ್ಮಿಕಾ ಮಂದಣ್ಣ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಡಬೇಕಾಗಿದೆಯಷ್ಟೇ. ಇನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಆದ್ರೆ ಇದೊಂದು ಥ್ರಿಲ್ಲರ್ ಕತೆಯ ಸಿನಿಮಾ ಎನ್ನಲಾಗಿದೆ.
ಆದ್ರೀಗ ವಿಜಯ್ ದೇವರಕೊಂಡ, ಪವನ್ ಕಲ್ಯಾಣ್ ಜೊತೆ ಬಿಗ್ ಸ್ಕ್ರೀನ್ನಲ್ಲಿ ಮೋಡಿ ಮಾಡಿದ್ದ ರಶ್ಮಿಕಾಗೆ ಬಿಟೌನ್ನಲ್ಲಿಯಾರು ಹೀರೋ ಆಗ್ತಾರೆ ಅನ್ನೋದು ಸಹಜವಾಗೇ ಕ್ಯೂರಿಯಾಸಿಟಿ ಹೆಚ್ಚಿಸಿದೆ. ರಶ್ಮಿಕಾಗೆ ಈ ಚಿತ್ರದಲ್ಲಿ ಬಾಲಿವುಡ್ನ ಸಕ್ಸಸ್ಫುಲ್ ಹೀರೋ ರಣದೀಪ್ ಹೂಡ ಅಂತಾ ಮಾತುಗಳು ಕೇಳಿ ಬರ್ತಿವೆ. ಒಂದು ವೇಳೆ ಇವರಿಬ್ರು ಜೊತೆಯಾದ್ರೆ ಸ್ಕ್ರೀನ್ ಮೇಲೆ ಈ ಪೇರ್ ನೋಡೋಕೆ ರಶ್ಮಿಕಾ ಫ್ಯಾನ್ಸ್ಗಂತೂ ಹಬ್ಬ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...