ಸಿನಿಮಾ ಮಾಡುವುದನ್ನು ಬಿಟ್ಟರೆ ಅವರಿಗೆ ರೈತರ ಕಷ್ಟ ಏನು ಗೊತ್ತಿದೆ !? ದರ್ಶನ್ ಗೆ ಹೆಚ್.ಡಿ. ರೇವಣ್ಣ ಟಾಂಗ್ !

Date:

ರೈತರ ಸಾಲ ಮನ್ನಾ ಮಾಡುವ ಬದಲು ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ನೀಡಲಿ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಹೇಳಿದ್ದರು.

ಈ ಹೇಳಿಕೆಗೆ ಸಚಿವ ಹೆಚ್.ಡಿ. ರೇವಣ್ಣ ಪ್ರತಿಕ್ರಿಯೆ ನೀಡಿ, ಆ ನಟರಿಗೆ ರೈತರ ಬಗ್ಗೆ ಏನು ಗೊತ್ತು ಎಂದು ಪ್ರಶ್ನಿಸಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇವಣ್ಣ, ಸಿನಿಮಾ ಮಾಡುವುದನ್ನು ಬಿಟ್ಟರೆ ಅವರಿಗೆ ರೈತರ ಕಷ್ಟ ಏನು ಗೊತ್ತಿದೆ. 6 ತಿಂಗಳು ಸಿನಿಮಾ ಮಾಡುವುದನ್ನು ಬಿಟ್ಟು ರೈತರ ಕಷ್ಟವನ್ನು ಅಧ್ಯಯನ ಮಾಡಲಿ. ರೈತರು ಸಾಲ ಮಾಡಿ ಕಷ್ಟದಲ್ಲಿದ್ದಾರೆ. ಅವರ ಕಷ್ಟವನ್ನು ಅರಿಯಲಿ ಎಂದು ಹೇಳಿದ್ದಾರೆ.

ರೈತರ ಸಾಲ ಮನ್ನಾ ಬಗ್ಗೆ ಮಾತನಾಡುವ ನಟ ಒಂದು ಸಿನಿಮಾಗೆ ಪಡೆದುಕೊಳ್ಳುವ ಸಂಭಾವನೆಯಲ್ಲಿ ಅರ್ಧದಷ್ಟನ್ನು ರೈತರ ಸಾಲ ತೀರಿಸಲು ಸರ್ಕಾರಕ್ಕೆ ಕೊಡಲಿ ಎಂದು ಹೇಳಿದ್ದಾರೆ.ಮಂಡ್ಯ ಚುನಾವಣೆಯ ವೇಳೆ 2 ಸಿನಿಮಾ ಫ್ರೀ ಮಾಡಿಕೊಡುವುದಾಗಿ ನಿರ್ಮಾಪಕರಿಂದ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ....

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ....

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...