ಮತ್ತೆ ಅಧಿಕಾರದ ನಿರೀಕ್ಷೆಯಲ್ಲಿದ್ದ ಮೋದಿ ಈ ಸುದ್ದಿ ಕೇಳಿ ಶಾಕ್ ಆಗ್ತಾರಾ?!

Date:

ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದ್ದ ಬಿಜೆಪಿ ಮತ್ತು ಪ್ರಧಾನಿ ಮೋದಿಗೆ ಸಮೀಕ್ಷೆಯ ವರದಿ ಶಾಕ್ ನೀಡಿದೆ.

ಸಾರ್ವತ್ರಿಕ ಲೋಕಸಭೆ ಚುನಾವಣೆಯ 4 ಹಂತದ ಮತದಾನ ಮುಕ್ತಾಯವಾಗಿದ್ದು, 5ನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಮತ್ತೆ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿರುವ ಪ್ರಧಾನಿ ಮೋದಿಗೆ ಈ ಹಂತದಲ್ಲಿ ಬಂದಿರುವ ಸಮೀಕ್ಷೆ ಆಘಾತ ತಂದಿದೆ ಎನ್ನಲಾಗಿದೆ.

ಹಿಂದಿ ಭಾಷಿಕ ರಾಜ್ಯಗಳಲ್ಲಿ ಈ ಬಾರಿ ಬಿಜೆಪಿ ಗೆಲುವು ಸುಲಭವಾಗಿಲ್ಲ ಎಂದು ಹೇಳಲಾಗಿದೆ 2014ರ ಚುನಾವಣೆಯಲ್ಲಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಭರ್ಜರಿ ಗೆಲುವು ಪಡೆದಿದ್ದ ಬಿಜೆಪಿ ಈ ಬಾರಿ ಹಿನ್ನಡೆ ಅನುಭವಿಸಲಿದೆ. ಕಳೆದ ಬಾರಿ 154 ಸ್ಥಾನಗಳಲ್ಲಿ 142 ರಲ್ಲಿ ಬಿಜೆಪಿ ಗೆಲುವು ಕಂಡಿತ್ತು.ಈ ಬಾರಿ 75 ಸೀಟು ಗಳಿಸುವುದು ಕಷ್ಟ ಎಂದು ಹೇಳಲಾಗಿದೆ.

ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ, ರಾಜಸ್ಥಾನ, ದೆಹಲಿ, ಮಧ್ಯಪ್ರದೇಶ, ಮೊದಲಾದ ರಾಜ್ಯಗಳಲ್ಲಿ ಬಿಜೆಪಿಗೆ ಈ ಬಾರಿ ಹಿನ್ನಡೆಯಾಗಬಹುದು ಎಂದು ಹೇಳಲಾಗಿದ್ದು, ಇದರಿಂದಾಗಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರು ಮತ್ತಷ್ಟು ಅಗ್ರೆಸ್ಸಿವ್ ಪ್ರಚಾರ ಕೈಗೊಂಡಿದ್ದಾರೆ. ಗೆಲುವಿಗೆ ಎಲ್ಲಾ ರೀತಿಯ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...