ಟಾಲಿವುಡ್​ ಅಂಗಳದಲ್ಲಿ ಕನ್ನಡ ಗಾಯನದ ಸಾಧನೆ..!

Date:

ಕಳೆದ ವಾರವಷ್ಟೇ ಬಿಡುಗಡೆಯಾದ ತೆಲುಗು ಸ್ಟಾರ್ ನಟ ಮಹೇಶ್ ಬಾಬು ಅಭಿನಯದ ಮಹರ್ಷಿ ಸಿನಿಮಾ, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಸಿದೆ. ಪ್ರಿನ್ಸ್ ಅಭಿನಯ, ಚಿತ್ರದ ಕಾನ್ಸೆಪ್ಟ್ ವಿಚಾರಕ್ಕೆ ಶಬ್ಬಾಶ್ ಎನ್ನಿಸಿಕೊಂಡ ಈ ಸಿನಿಮಾ ಹಾಡಿನ ವಿಚಾರದಲ್ಲೂ ಎಲ್ಲಾರ ಮನ ಗೆದ್ದಿದೆ. ಅದರಲ್ಲೂ ಕನ್ನಡದ ಗಾಯಕ ವಿಜಯ್ ಪ್ರಕಾಶ್ ಹಾಡಿರುವ ಹಾಡೊಂದು ಟಾಲಿವುಡ್ ಅಂಗಳದಲ್ಲಿ ಸಖತ್ ಸೌಂಡ್ ಮಾಡ್ತಿದೆ. ಕೇಳುಗರ ಮನಕ್ಕೆ ಖುಷಿ ಕೊಡ್ತಿದೆ. ‘ಓಹ್…ವಿಜಯ್ ಪ್ರಕಾಶ್ ಹಾಡಿರೋ ಹಾಡಾ ಇದು….ಅದಕ್ಕೆ ಸೂಪರ್ ಆಗಿದೆ’ ಎಂಬ ಮಾತುಗಳು ಕೇಳಿ ಬರುತ್ತಿದೆ. ಹೌದು, ದೇವಿಶ್ರೀ ಪ್ರಸಾದ್ ಸಂಗೀತ ನಿರ್ದೇಶನ ಹೊಂದಿರುವ ಮಹರ್ಷಿ ಚಿತ್ರದಲ್ಲಿ ‘ಇದೇ ಕದ ನೀ ಕಥಾ…..’ ಎಂಬ ಹಾಡನ್ನ ವಿಜಯ್ ಪ್ರಕಾಶ್ ಹಾಡಿದ್ದಾರೆ.


ಕಥೆಗೆ ಅನುಸಾರವಾಗಿ ಈ ಹಾಡು ಚಿತ್ರದಲ್ಲಿ ಬರಲಿದ್ದು, ಅದಕ್ಕೆ ತಕ್ಕಂತೆ ಕೊರಿಯೋಗ್ರಫಿ ಮಾಡಲಾಗಿದೆ. ಅದಕ್ಕೆ ಈ ಹಾಡು ಕೇಳುವುದಕ್ಕೂ ಹಾಗೂ ಬೆಳ್ಳಿತೆರೆಯ ಮೇಲೆ ನೋಡುವುದಕ್ಕೂ ತುಂಬಾ ಇಷ್ಟ ಆಗುತ್ತೆ. ಯಜಮಾನ ಸಿನಿಮಾ ಟೈಟಲ್ ಹಾಡು ‘ಬಂದ ನೋಡೋ ಯಜಮಾನ….’, ರಾಜಕುಮಾರ ಚಿತ್ರದ ‘ಬೊಂಬೆ ಹೇಳುತೈತೆ….’ ಹಾಡು, ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಚಿತ್ರದ ‘ಒಂದಾನೊಂದು ಊರಲ್ಲಿ…..’ ಹಾಡುಗಳಂತೆ ಮಹರ್ಷಿ ಚಿತ್ರದ ‘ಇದೇ ಕದ ನೀ ಕಥಾ…..’ ಹಾಡು ಮೂಡಿಬಂದಿದೆ. ಇನ್ನುಳಿದಂತೆ ಶ್ರೀಮಣಿ ಈ ಹಾಡಿಗೆ ಸಾಹಿತ್ಯ ಬರೆದಿದ್ದು, ವಂಶಿ ಚಿತ್ರವನ್ನ ನಿರ್ದೇಶನ ಮಾಡಿದ್ದಾರೆ. ವಿಜಯ್ ಪ್ರಕಾಶ್ ತೆಲುಗಿನಲ್ಲಿ ಹಾಡಿರುವ ಮೊದಲ ಹಾಡು ಇದಲ್ಲ. ಅನೇಕ ಹಾಡುಗಳನ್ನ ಹಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...