ಬಿಜೆಪಿಯವರು ಹಗಲುಗನಸು ಕಾಣಲಿ : ಎಚ್, ವಿಶ್ವನಾಥ್

Date:

ಲೋಕಸಭೆ ಮತದಾನೋತ್ತರ ಸಮೀಕ್ಷೆ ಹಿನ್ನೆಲೆಯಲ್ಲಿ ಬಿಜೆಪಿಯವರು ಹಗಲು ಕನಸು ಕಾಣುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಟೀಕಿಸಿದ್ದಾರೆ. ಬಿಜೆಪಿಯವರು ಎಲ್ಲಾ ರೀತಿಯ ಕನಸುಗಳನ್ನು ಕಾಣಬಹುದು.

ನಮ್ಮದೇನೂ ಅಭ್ಯಂತರವಿಲ್ಲ. ಇನ್ನು ಮೂರು ದಿನದಲ್ಲಿ ಮತದಾರರ ತೀರ್ಪು ಹೊರಬರಲಿದೆ. ಆಗ ಎಲ್ಲವೂ ಗೊತ್ತಾಗಲಿದೆ ಎಂದರು.

ಈ ಹಿಂದೆಯೂ ಸಮೀಕ್ಷೆಗಳು ನಡೆದಿದ್ದವು. ಆ ಸಮೀಕ್ಷೆಗಳ ವಾಸ್ತವಿಕತೆ ಏನಾಗಿತ್ತೆಂಬುದು ನಮ್ಮ ಮುಂದಿದೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾರರು ಯಾರ ವಿರುದ್ಧ ಇದ್ದರು ಎಂಬುದನ್ನು ಹೇಳುವುದು ಕಷ್ಟ.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿವೆ.ಮತದಾರರು ಈ ಎರಡೂ ಸರ್ಕಾರಗಳ ಆಡಳಿತವನ್ನು ಪರಿಗಣನೆಗೆ ತೆಗೆದುಕೊಂಡಿದ್ದಾರೆ ಎಂದರು.

ಮತದಾನದ ದಿನದಂದು ಮತದಾರರು ಗುಂಪುಗುಂಪಾಗಿ ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತ ಚಲಾವಣೆ ಮಾಡಿದ್ದಾರೆ. ಯಾರ ಪರವಾಗಿ, ಯಾರ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ ಎಂಬುದು ನಿಗೂಢವಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ದೊರೆಯಲಿದೆ ಎಂಬುದನ್ನು ನಿರ್ದಿಷ್ಟವಾಗಿ ಹೇಳಲಾಗದು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...