ದಿನಕಳೆಯುತಿದ್ದಂತೆ ಬಿಜೆಪಿ ಬಣ್ಣ ಬಯಲಾಗಲಿದೆ : ಪರಮೇಶ್ವರ್

Date:

ಭಾರತೀಯ ಜನತಾ ಪಕ್ಷದವರ ಉದ್ದೇಶ ಕೆಲ ದಿನಗಳು ಕಳೆದ ನಂತರ ಜನರಿಗೆ ಅರಿವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನೋಡಿದ್ದೇವೆ. ಅದರ ಪರಿಣಾಮ ಸ್ಥಳೀಯ ಸಂಸ್ಥೆ ಚುನಾವಣೆ ಮೇಲೂ ಆಗಿದೆ. ರಾಜಕಾರಣ ನಿಂತ ನೀರಲ್ಲ. ಬದಲಾವಣೆ ಆಗೇ ಆಗುತ್ತದೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಏಳುಬೀಳು ಸಾಮಾನ್ಯ. ಕೇಂದ್ರದಲ್ಲೂ ಹಾಗೇ ಆಗಿದೆ. 10 ವರ್ಷಗಳ ಕಾಲ ಮನ್‍ಮೋಹನ್‍ಸಿಂಗ್ ಅಧಿಕಾರದಲ್ಲಿದ್ದರು. ಈಗ ಬಿಜೆಪಿ ಬಂದಿರಬಹುದು. ನಾವು ಬೌನ್ಸ್ ಬ್ಯಾಕ್ ಆಗಲಿದ್ದೇವೆ. ನಮ್ಮ ಉದ್ದೇಶ ಒಳ್ಳೆಯದಿದೆ, ನಾವು ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದುಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ವಿಧಾನ ಸಭಾಧ್ಯಕ್ಷರಾದ ರಮೇಶ್‍ಕುಮಾರ್ ಹಿರಿಯ ನಾಯಕರು ಅವರು ಅನುಭವದ ಆಧಾರದ ಮೇಲೆ ಮಾತನಾಡಿರುತ್ತಾರೆ ಎಂದರು.
ನಕ್ಸಲರ ಚಟುವಟಿಕೆ ಇದೆ. ಜನರ ರಕ್ಷಣೆ ಮುಖ್ಯ. ನ್ಯಾಷನಲ್ ಇಂಟೆಲಿಜೆನ್ಸ್ ತಂಡ ಈ ಬಗ್ಗೆ ಗಮನಹರಿಸಲಿದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

Share post:

Subscribe

spot_imgspot_img

Popular

More like this
Related

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...