No menu items!
3.1 C
Munich
Thursday, April 30, 2026

ಶೋಭಕ್ಕ ತಾಳ್ಮೆಯಿಂದ ಇರಕ್ಕ ಎಂದ ಎಂ.ಬಿ. ಪಾಟೀಲ್ !? ಯಾಕೆ ಗೊತ್ತಾ ?

Must read

ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹಸಚಿವ ಎಂ.ಬಿ. ಪಾಟೀಲ್ ಶತಮೂರ್ಖ ಗೃಹಸಚಿವ ಎಂದು ಟೀಕಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಎಂ.ಬಿ. ಪಾಟೀಲ್ ತಿರುಗೇಟು ನೀಡಿದ್ದಾರೆ.

ಶೋಭಕ್ಕ ಸ್ವಲ್ಪ ತಾಳ್ಮೆಯಿಂದ ಇರಬೇಕು. ಅವರು ಹೆಣ್ಣುಮಕ್ಕಳು ಎಂದು ಯಾವ ಪದಗಳನ್ನು ಪ್ರಯೋಗಿಸುತ್ತಿಲ್ಲ. ನಾವು ವಿಜಯಪುರದವರು. ನಮಗೆ ಬೇರೆ ಪದಗಳು ಕೂಡ ಗೊತ್ತು ಎಂದು ಮೈಸೂರಿನಲ್ಲಿ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಹೆಣ್ಣು ಮಕ್ಕಳ ಬಾಯಲ್ಲಿ ಅಂತಹ ಪದಗಳು ಬರಬಾರದು. ಶೋಭಾ ಕರಂದ್ಲಾಜೆ ಹಿನ್ನೆಲೆ, ಸಂಸ್ಕಾರ ಜನರಿಗೆ ಗೊತ್ತಿದೆ. ಅದೇ ರೀತಿ ನಮ್ಮ ಹಿನ್ನೆಲೆ, ಸಂಸ್ಕಾರ, ಸಂಸ್ಕೃತಿಯ ಬಗ್ಗೆಯೂ ಜನರಿಗೆ ಗೊತ್ತಿದೆ. ಜಿಂದಾಲ್ ಗೆ ಭೂಮಿ ನೀಡುವ ವಿಚಾರದಲ್ಲಿ ತಕರಾರು ಇದ್ದರೆ ಶೋಭಾ ಕರಂದ್ಲಾಜೆಯವರು ಸಂಪುಟ ಉಪಸಮಿತಿಯ ಮುಂದೆ ಹೋಗಲಿ.ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article