ಸಂಸದರಿಗೆ ಬೆಂಗಳೂರಿನಲ್ಲಿ ಡಿಕೆಶಿ ಡಿನ್ನರ್ !?

Date:

ಡಿ.ಕೆ.ಶಿವಕುಮಾರ್..ರಾಜ್ಯ ರಾಜಕೀಯದಲ್ಲಿ ಟ್ರಬಲ್ ಶೂಟರ್ ಎಂದೇ ಪ್ರಖ್ಯಾತಿ ಪಡೆದಿರುವ ಸಚಿವರು. ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಇವರಿಗೆ ಒಳ್ಳೆ ನಂಟಿದೆ. ಇದನ್ನು ಉಪಯೋಗಿಸಿಕೊಂಡು ರಾಷ್ಟ್ರಮಟ್ಟದಲ್ಲಿ ಮಿಂಚಲು ಡಿಕೆಶಿ ಪ್ಲಾನ್ ಮಾಡಿದ್ದಾರಂತೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಘಟಾನುಘಟಿ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ, ಕೆ.ಎಚ್‍.ಮುನಿಯಪ್ಪ, ವೀರಪ್ಪ ಮೊಯ್ಲಿ ಸೋಲುಂಡಿದ್ದಾರೆ. ಇದನ್ನೇ ದಾಳವಾಗಿಸಿಕೊಂಡು ಡಿಕೆಶಿ ರಾಷ್ಟ್ರಮಟ್ಟದಲ್ಲಿ ಮುನ್ನೆಲೆಗೆ ಬರಲು ಪ್ರಯತ್ನ ನಡೆಸಿದ್ದಾರೆ ಎನ್ನಲಾಗ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸಂಸದರಿಗೆ ಡಿಕೆಶಿ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರಂತೆ.

ರಾಜ್ಯದ ಅಭಿವೃದ್ಧಿ ಯೋಜನೆಗಳ ಚರ್ಚೆ ನೆಪದಲ್ಲಿ, ರಾಜ್ಯದ ಸಂಸದರಿಗೆ ಔತಣಕೂಟ ಆಯೋಜಿಸಿದ್ದಾರೆ. ಈ ಸಂಬಂಧ ರಾಜ್ಯ ಕಾಂಗ್ರೆಸ್‍ ರಾಜ್ಯಸಭಾ ಸದಸ್ಯರಿಗೆ ಡಿಕೆಶಿ ಈಗಾಗಲೇ ಅಹ್ವಾನ ನೀಡಿದ್ದಾರಂತೆ.ಇನ್ನು ಬಿಜೆಪಿ ಸಂಸದರಿಗೂ ಇಂದು ಆಹ್ವಾನ ನೀಡಲಿದ್ದಾರೆ ಎನ್ನಲಾಗ್ತಿದೆ. ವಿಶೇಷ ಅಂದ್ರೆ ಮಂಡ್ಯದ ಸಂಸದೆ ಸುಮಲತಾ ಅವರಿಗೂ ಡಿಕೆಶಿ ಔತಣ ಕೂಟಕ್ಕೆ ಕರೆಯಲಿದ್ದಾರೆ ಅಂತಾ ಹೇಳಲಾಗ್ತಿದೆ.

 

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...