ಈ ಸರ್ಕಾರ ಯಾವ್ದೋ ಹಾಸನ, ಮಂಡ್ಯಕ್ಕೆ ಮಾತ್ರ ಸರ್ಕಾರವಲ್ಲ, ನಿಮ್ಮ ರಾಯಚೂರಿಗು ಹೌದು ! ಎಂದ್ರು ಸಿಎಂ ಹೆಚ್ ಡಿ ಕೆ ಯಾಕೆ ಗೊತ್ತಾ?!

Date:

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು, ರಾಯಚೂರು ಜಿಲ್ಲೆಯ 272 ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಲಾಗಿದೆ. ಆಂಧ್ರದಲ್ಲಿ 5 ವರ್ಷವಾದರೂ ಸಾಲ ಮನ್ನಾವಾಗಿಲ್ಲ. ಆದ್ರೇ ನಮ್ಮ ಸರ್ಕಾರ ಬಂದ ಒಂದೇ ವರ್ಷದಲ್ಲಿ ಮನ್ನಾ ಮಾಡಲಾಗಿದೆ ಎಂದು ಹೇಳಿದರು.

ನೀರಾವರಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ.ರಾಯಚೂರು ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗೆ ಕ್ರಮ ಕೈಗೊಳ್ಳುತ್ತೇವೆ. ಉತ್ತರ ಕರ್ನಾಟಕದ ಕೆರೆ-ಕಟ್ಟೆಗಳನ್ನು ತುಂಬಿಸುತ್ತೇವೆ. ಜಿಲ್ಲೆಯ ರಸ್ತೆಯ ಅಭಿವೃದ್ಧಿದಾದಿ ರೂ.344 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು.

ಇನ್ನೂ ಈ ನನ್ನ ಗ್ರಾಮ ವಾಸ್ತವ್ಯವನ್ನು ಬಿಜೆಪಿ ಟೀಕಿಸುತ್ತಿದೆ. ಆದರೇ ನಾನು ಅದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ. ಈ ಸರ್ಕಾರ ಯಾವ್ದೋ ಹಾಸನ, ಮಂಡ್ಯಕ್ಕೆ ಮಾತ್ರ ಸರ್ಕಾರವಲ್ಲ. ನಿಮ್ಮ ರಾಯಚೂರು ಸರ್ಕಾರವೂ ಹೌದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಸ್ಪಷ್ಟಪಡಿಸಿದರು.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...