ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು, ರಾಯಚೂರು ಜಿಲ್ಲೆಯ 272 ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಲಾಗಿದೆ. ಆಂಧ್ರದಲ್ಲಿ 5 ವರ್ಷವಾದರೂ ಸಾಲ ಮನ್ನಾವಾಗಿಲ್ಲ. ಆದ್ರೇ ನಮ್ಮ ಸರ್ಕಾರ ಬಂದ ಒಂದೇ ವರ್ಷದಲ್ಲಿ ಮನ್ನಾ ಮಾಡಲಾಗಿದೆ ಎಂದು ಹೇಳಿದರು.
ನೀರಾವರಿ ಯೋಜನೆಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ.ರಾಯಚೂರು ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗೆ ಕ್ರಮ ಕೈಗೊಳ್ಳುತ್ತೇವೆ. ಉತ್ತರ ಕರ್ನಾಟಕದ ಕೆರೆ-ಕಟ್ಟೆಗಳನ್ನು ತುಂಬಿಸುತ್ತೇವೆ. ಜಿಲ್ಲೆಯ ರಸ್ತೆಯ ಅಭಿವೃದ್ಧಿದಾದಿ ರೂ.344 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು.
ಇನ್ನೂ ಈ ನನ್ನ ಗ್ರಾಮ ವಾಸ್ತವ್ಯವನ್ನು ಬಿಜೆಪಿ ಟೀಕಿಸುತ್ತಿದೆ. ಆದರೇ ನಾನು ಅದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ. ಈ ಸರ್ಕಾರ ಯಾವ್ದೋ ಹಾಸನ, ಮಂಡ್ಯಕ್ಕೆ ಮಾತ್ರ ಸರ್ಕಾರವಲ್ಲ. ನಿಮ್ಮ ರಾಯಚೂರು ಸರ್ಕಾರವೂ ಹೌದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಸ್ಪಷ್ಟಪಡಿಸಿದರು.