ಜೀರೋ ಟ್ರಾಫಿಕ್ ಗಾಗಿ ಕ್ಷಮೆ ಯಾಚಿಸಿದ ಡಿಸಿಎಂ ಪರಮೇಶ್ವರ್ ! ಯಾಕೆ ಗೊತ್ತಾ?

Date:

ಜೀರೋ ಟ್ರಾಫಿಕ್ ಗಾಗಿ ಡಿಸಿಎಂ ಡಾ.ಜಿ. ಪರಮೇಶ್ವರ್ ಶಾಲಾ ಮಕ್ಕಳು, ಪೋಷಕರ ಕ್ಷಮೆ ಯಾಚಿಸಿದ್ದಾರೆ.

ಗೃಹ ಸಚಿವರಾದ ಸಂದರ್ಭದಲ್ಲಿಯೂ ಜೀರೋ ಟ್ರಾಫಿಕ್ ಮೂಲಕ ಸಂಚರಿಸುತ್ತಿದ್ದ ಕಾರಣ ಪರಮೇಶ್ವರ್ ಅವರಿಂದ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಸಮಯದ ಕಾರಣ ಮತ್ತು ಅವಕಾಶ ಇರುವ ಕಾರಣ ಜೀರೋ ಟ್ರಾಫಿಕ್ ಬಳಸಿಕೊಳ್ಳುವ ಬಗ್ಗೆ ಅವರು ಸಮರ್ಥಿಸಿಕೊಂಡಿದ್ದರು.

ಇಂದು ಡಿಸಿಎಂ ಜೀರೋ ಟ್ರಾಫಿಕ್ ನಿಂದಾಗಿ ಶಾಲಾ ಮಕ್ಕಳಿಗೆ ತೊಂದರೆಯಾಗಿದ್ದು, ಅವರು ಕ್ಷಮೆಯಾಚಿಸಿದ್ದಾರೆ. ಬೆಂಗಳೂರಿನಲ್ಲಿ ಆರ್.ಟಿ. ನಗರದಲ್ಲಿ ಕಾಮಗಾರಿ ವೀಕ್ಷಣೆಗೆ ಜಿ. ಪರಮೇಶ್ವರ್ ಜೀರೋ ಟ್ರಾಫಿಕ್ ನಲ್ಲಿ ತೆರಳಿದ್ದಾರೆ. ಇದರಿಂದಾಗಿ ಆರ್.ಟಿ. ನಗರದಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ.

ಪರಮೇಶ್ವರ ಆಗಮನದ ಹಿನ್ನೆಲೆಯಲ್ಲಿ ಖಾಸಗಿ ಶಾಲೆ ಬಸ್ ಗಳಿಗೆ ತಡೆ ನೀಡಲಾಗಿತ್ತು.20 ನಿಮಿಷಗಳ ಕಾಲ ರಸ್ತೆಯಲ್ಲೇ ಮಕ್ಕಳು ಬಸ್ ನಲ್ಲಿ ಕುಳಿತುಕೊಳ್ಳುವಂತಾಗಿತ್ತು. ಪರಮೇಶ್ವರ್ ಹಾಗೂ ಅವರ ಬೆಂಬಲಿಗರ ಸಾಲು ಸಾಲು ವಾಹನಗಳು ಬಂದಿದ್ದ ಕಾರಣ, ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ಶಾಲಾ ಮಕ್ಕಳು, ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಇದು ತಮ್ಮ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಪರಮೇಶ್ವರ್ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...