ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿಲ್ಲ ಎಂದ್ರು ಸಿದ್ದರಾಮಯ್ಯ ! ಹೌದ ?

Date:

ಸಚಿವ ಸ್ಥಾನಕ್ಕಾಗಿ ಆನಂದ್ ಸಿಂಗ್ ಅವರು ರಾಜೀನಾಮೆ ನೀಡಿಲ್ಲ. ಬದಲಿಗೆ ಜಿಂದಾಲ್ ವಿಚಾರವಾಗಿ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಸಿಂಗ್ ಅವರು ಒಬ್ಬರೇ ರಾಜೀನಾಮೆ ನೀಡಿರುವುದು, ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿಲ್ಲ. ಈ ವಿಚಾರವನ್ನು ಸ್ಪೀಕರ್ ಕೂಡ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಬಂದಿರುವ ರಾಜೀನಾಮೆ ಲೆಟರ್‍ಹೆಡ್ ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಆನಂದ್ ಸಿಂಗ್ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಅವರ ಜೊತೆ ಮಾತನಾಡುತ್ತೇನೆ ಎಂದು ಹೇಳಿದರು.ಸದ್ಯಕ್ಕೆ ಸಮನ್ವಯ ಸಮಿತಿ ಸಭೆಯನ್ನು ಕರೆಯಲು ಸಂದರ್ಭ ಬಂದಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಜಿಟಿಡಿ ಅವರು ಆಪರೇಷನ್ ಕಮಲ ಮಾಡುತ್ತಿಲ್ಲ ಎಂಬ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಆತನಿಗೆ ಆ ಬಗ್ಗೆ ಆ ರೀತಿಯ ಮಾಹಿತಿ ಇರಬಹುದು. ಆದರೆ ಬಿಜೆಪಿಯವರೇ ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಹೇಳಿದರು

Share post:

Subscribe

spot_imgspot_img

Popular

More like this
Related

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...