ವರ್ಲ್ಡ್ ಕಪ್ ಫೈನಲ್ಲೇ ಧೋನಿ ವಿದಾಯದ ಪಂದ್ಯ..!?

Date:

ವಿಶ್ವಕಪ್ ನಂತರ ಟೀಮ್ ಇಂಡಿಯಾದ ಮಾಜಿ ನಾಯಕ , ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾದಿಂದ ದೂರ ಉಳಿಯುವ ಸಾಧ್ಯತೆಯಿದೆ.

ಧೋನಿ ದಿಢೀರ್ ಅಂತ ಮೂರೂ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿ, ಅಚ್ಚರಿ ನ್ಯೂಸ್ ಕೊಟ್ಟಿದ್ದರು. ವಿಶ್ವಕಪ್ ನಲ್ಲಿ ವೈಪಲ್ಯ ಅನುಭವಿಸುತ್ತಿರುವ ಅವರು ದಿಢೀರ್ ಅಂತ ಕ್ರಿಕೆಟಿಗೆ ನಿವೃತ್ತಿ ಘೋಷಿಸಲೂ ಬಹುದು.

ವಿಶ್ವಕಪ್ ಫೈನಲ್ ಬಳಿಕ ಧೋನಿ ದಿಢೀರ್ ಎಂದು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಧೋನಿ ಯಾವ್ದೇ ನಿರ್ಧಾರವನ್ನು ತತ್ ಕ್ಷಣವೇ ತೆಗೆದುಕೊಂಡರೆ ಆಶ್ಚರ್ಯ ಪಡಬೇಕಿಲ್ಲ.

ಧೋನಿ ಈ ಬಾರಿಯ ವಿಶ್ವಕಪ್ ನಲ್ಲಿ ಕಳಪೆ ಫಾರ್ಮ್​ನಲ್ಲಿದ್ದಾರೆ. ಧೋನಿಗೆ ಸೆಮಿ ಫೈನಲ್ ಅಥವಾ ಫೈನಲ್ ಪಂದ್ಯವು ವೃತ್ತಿ ಬದುಕಿನ ವಿದಾಯ ಪಂದ್ಯವಾಗಲಿದೆ ಎಂಬ ಮಾತು ಎಲ್ಲೆಡೆ ಕೇಳಿ ಬರುತ್ತಿದೆ.

ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದೆ.
ಜುಲೈ 14ರಂದು ನಡೆಯಲಿರುವ ಫೈನಲ್​ಗೇರುವ ತುಡಿತದಲ್ಲಿದೆ. ಈ ಮೂಲಕ 2ನೇ ಬಾರಿ ವಿಶ್ವಕಪ್​ ತಂದುಕೊಟ್ಟ ನಾಯಕನಿಗೆ ಅದ್ದೂರಿ ಬೀಳ್ಕೊಡುಗೆ ಕೊಡುವ ನಿರ್ಧಾರದಲ್ಲಿದೆ ವಿರಾಟ್​ ಕೊಹ್ಲಿ ಅಂಡ್ ಟೀಮ್.
ಧೋನಿ ಭಾರತಕ್ಕೆ 2ನೇ ಏಕದಿನ ವಿಶ್ವಕಪ್ ತಂದುಕೊಟ್ಟ ನಾಯಕ. 2007 ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ ಹಾಗೂ 2011ರ ವಿಶ್ವಕಪ್ ತಂದು ಕೊಟ್ಟ ಹಿರಿಮೆ ಧೋನಿಯದ್ದು.

ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 348 ಏಕದಿನ ಪಂದ್ಯಗಳನ್ನು ಆಡಿರುವ ಮಹೇಂದ್ರ ಸಿಂಗ್ ಧೋನಿ 50.58 ರನ್ ಸರಾಸರಿಯಲ್ಲಿ 10723 ರನ್​ಗಳಿಸಿದ್ದಾರೆ. 2004ರಲ್ಲಿ ಬಾಂಗ್ಲಾದೇಶದ ವಿರುದ್ಧ ಏಕದಿನ ಕ್ರಿಕೆಟ್​ಗೆ ಪಾದರ್ಪಣೆ ಮಾಡಿದ ಧೋನಿ, ವಿಶ್ವಕಪ್​ನೊಂದಿಗೆ ಕ್ರಿಕೆಟ್​ ವಿದಾಯ ಹೇಳಲು ಇಚ್ಛಿಸಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...