ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸರ್ಕಾರದಿಂದ ಮಂಡಿಸಿರುವ ಈ ಬಾರಿಯ ಬಜೆಟ್ ಜನವಿರೋಧಿಯಾಗಿದೆ. ರೈತ ವಿರೋಧಿ ಬಜೆಟ್ ಆಗಿದೆ. ಜನರು, ರೈತರಿಗೆ ನೆರವಾಗುವಂತ ಯಾವುದೇ ಪ್ರಯೋಜನ ಬಜೆಟ್ ನಿಂದ ಆಗಿಲ್ಲ ಎಂದು ತಿಳಿಸಿದ್ದಾರೆ.
ಇನ್ನೂ ಮುಂದುವರೆದು ಮಾತನಾಡಿದ ಅವರು, ಈ ಬಾರಿಯ ಬಜೆಟ್ ನಲ್ಲಿ ಪೆಟ್ರೋಲ್ ಮೇಲೆ ಸೆಸ್ ಏರಿಕೆ ಮಾಡಲಾಗಿದೆ. ಈ ಮೂಲಕ ವಾಹನ ಸವಾರರು ಬೆಲೆ ಏರಿಕೆಯ ಬಿಸಿಯನ್ನು ಎದುರಿಸಬೇಕಾಗುವಂತಾಗಿದೆ.ಜನಸಾಮಾನ್ಯರಿಗಂತೂ ಯಾವುದೇ ಪ್ರಯೋಜನ ಬಜೆಟ್ ನಿಂದ ಆಗಿಲ್ಲ. ಉದ್ಯೋಗ, ನೀರಾವರಿಗೂ ಈ ಬಾರಿ ಅವಕಾಶ ನೀಡಿಲ್ಲ ಎಂದು ಕಿಡಿಕಾರಿದರು.
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೂ ಯಾವುದೇ ಹೊಸ ಯೋಜನೆಗಳನ್ನು ನೀಡಿಲ್ಲ. ಕಳೆದ ಬಾರಿಯೂ ಅನ್ಯಾಯವಾಗಿತ್ತು, ಈ ಬಾರಿಯೂ ರಾಜ್ಯಕ್ಕೆ ಅನ್ಯಾಯವಾಗಿದೆ. ಒಟ್ಟಾರೆಯಾಗಿ ಹೇಳಬೇಕಾದರೇ ನಾವು ಏನು ಮಾಡಿದರೂ ನಡೆಯುತ್ತದೆ ಎನ್ನುವ ಧೋರಣೆ ಕೇಂದ್ರ ಸರ್ಕಾರದ್ದಾಗಿ ಎಂದು ಹರಿಹಾಯ್ದಿದ್ದಾರೆ