ನೇರವಾಗಿ ವಿಶ್ವಾಸಮತ ಯಾಚನೆಗೆ ಅವಕಾಶ ಕೊಡಿ ! ಸ್ಪೀಕರ್ ಗೆ ಬಿಜೆಪಿ ನಿಯೋಗ ಮನವಿ !?

Date:

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಾಳೆ ವಿಶ್ವಾಸ ಮತಯಾಚನೆಗೂ ಮೊದಲು ಪ್ರಸಕ್ತ ಬೆಳವಣಿಗೆ ಬಗ್ಗೆ ಮಾತನಾಡಲಿದ್ದಾರೆ. ವಿಶ್ವಾಸ ಮತಯಾಚನೆ ವಿಳಂಬ ಮಾಡಿ ಸಮಯಾವಕಾಶ ಬಳಸಿಕೊಂಡು ಅತೃಪ್ತ ಶಾಸಕರನ್ನು ಸೆಳೆಯಲು ಕಾರ್ಯತಂತ್ರ ರೂಪಿಸಲಾಗಿದೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾದ ಬಿಜೆಪಿ ನಿಯೋಗದಿಂದ ನಾಳೆ ವಿಶ್ವಾಸ ಮತಯಾಚನೆ ವೇಳೆ ಕಾಲಹರಣ ಮಾಡದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಲಾಗಿದೆ.

ವಿಶ್ವಾಸಮತಯಾಚನೆ ಹೆಸರಲ್ಲಿ ಚರ್ಚೆಗೆ ಅವಕಾಶ ನೀಡಬಾರದು. ಚರ್ಚೆಗೆ ಅವಕಾಶ ನೀಡಿದರೆ ಕಾಲಹರಣ ಮಾಡುವ ಸಾಧ್ಯತೆ ಇದೆ. ನೇರವಾಗಿ ವಿಶ್ವಾಸ ಮತಯಾಚನೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.ವಿರೋಧ ಪಕ್ಷದಿಂದ ಯಾರೂ ಭಾಷಣ ಮಾಡುವುದಿಲ್ಲ. ನೇರವಾಗಿ ವಿಶ್ವಾಸ ಮತಯಾಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಬಿಜೆಪಿ ಶಾಸಕರಾದ ಬಸವರಾಜ ಬೊಮ್ಮಾಯಿ, ಕೆ.ಜಿ. ಬೋಪಯ್ಯ, ಮಾಧುಸ್ವಾಮಿ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬೆಂಗಳೂರು:...

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ!

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ! ಅಹಮದಾಬಾದ್: 2026ರ ಟಿ20 ವಿಶ್ವಕಪ್...

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...