ನೇರವಾಗಿ ವಿಶ್ವಾಸಮತ ಯಾಚನೆಗೆ ಅವಕಾಶ ಕೊಡಿ ! ಸ್ಪೀಕರ್ ಗೆ ಬಿಜೆಪಿ ನಿಯೋಗ ಮನವಿ !?

Date:

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಾಳೆ ವಿಶ್ವಾಸ ಮತಯಾಚನೆಗೂ ಮೊದಲು ಪ್ರಸಕ್ತ ಬೆಳವಣಿಗೆ ಬಗ್ಗೆ ಮಾತನಾಡಲಿದ್ದಾರೆ. ವಿಶ್ವಾಸ ಮತಯಾಚನೆ ವಿಳಂಬ ಮಾಡಿ ಸಮಯಾವಕಾಶ ಬಳಸಿಕೊಂಡು ಅತೃಪ್ತ ಶಾಸಕರನ್ನು ಸೆಳೆಯಲು ಕಾರ್ಯತಂತ್ರ ರೂಪಿಸಲಾಗಿದೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾದ ಬಿಜೆಪಿ ನಿಯೋಗದಿಂದ ನಾಳೆ ವಿಶ್ವಾಸ ಮತಯಾಚನೆ ವೇಳೆ ಕಾಲಹರಣ ಮಾಡದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಲಾಗಿದೆ.

ವಿಶ್ವಾಸಮತಯಾಚನೆ ಹೆಸರಲ್ಲಿ ಚರ್ಚೆಗೆ ಅವಕಾಶ ನೀಡಬಾರದು. ಚರ್ಚೆಗೆ ಅವಕಾಶ ನೀಡಿದರೆ ಕಾಲಹರಣ ಮಾಡುವ ಸಾಧ್ಯತೆ ಇದೆ. ನೇರವಾಗಿ ವಿಶ್ವಾಸ ಮತಯಾಚನೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.ವಿರೋಧ ಪಕ್ಷದಿಂದ ಯಾರೂ ಭಾಷಣ ಮಾಡುವುದಿಲ್ಲ. ನೇರವಾಗಿ ವಿಶ್ವಾಸ ಮತಯಾಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಬಿಜೆಪಿ ಶಾಸಕರಾದ ಬಸವರಾಜ ಬೊಮ್ಮಾಯಿ, ಕೆ.ಜಿ. ಬೋಪಯ್ಯ, ಮಾಧುಸ್ವಾಮಿ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...