ಪೈಲ್ವಾನ್ ಮಾತ್ರವಲ್ಲ ಕುರುಕ್ಷೇತ್ರ ಕೂಡ ಮುಂದಕ್ಕೆ..!

Date:

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಈ ಎರಡು ಸಿನಿಮಾಗಳು ಸದ್ಯ ಸಿಕ್ಕಾಪಟ್ಟೆ ನಿರೀಕ್ಷೆಯನ್ನು ಹುಟ್ಟು ಹಾಕಿರುವ ಚಿತ್ರಗಳು.
ಸುದೀಪ್ ಮತ್ತು ದರ್ಶನ್ ಅಭಿಮಾನಿಗಳು ಬಹುದಿನಗಳಿಂದ ಈ ಸಿನಿಮಾಗಳಿಗೆ ಕಾಯುತ್ತಿದ್ದಾರೆ. ಆಗಸ್ಟ್ 9ಕ್ಕೆ ಕುರುಕ್ಷೇತ್ರ ಮತ್ತು ಪೈಲ್ವಾನ್ ಎರಡೂ ಒಂದೇ ದಿನ ರಿಲೀಸ್ ಆಗುತ್ತವೆ ಎಂದೇ ಹೇಳಲಾಗುತ್ತಿತ್ತು. ಈ ಎರಡು ಸಿನಿಮಾಗಳು ಒಟ್ಟಿಗೆ ರಿಲೀಸಾದ್ರೆ ಥಿಯೇಟರ್​​ಗಳ ಸಮಸ್ಯೆ ಎದುರಾಗಬಹುದು. ಕಲೆಕ್ಷನ್ ವಿಚಾರದಲ್ಲೂ ಲಾಸ್ ಆಗುವ ಸಾಧ್ಯತೆ ಇತ್ತು. ಆದರೆ, ಈ ಎರಡು ಸಿನಿಮಾ ರಿಲೀಸ್ ಡೇಟ್​ ನಲ್ಲಿ ಬದಲಾವಣೆಗಳಾಗಿದ್ದವು.
ಕುರುಕ್ಷೇತ್ರ ಆಗಸ್ಟ್ 2ಕ್ಕೆ ಪೈಲ್ವಾನ್ ಆಗಸ್ಟ್ 29ಕ್ಕೆ ರಿಲೀಸ್ ಎಂದು ತಿಳಿದುಬಂದಿತ್ತು. ಎಲ್ಲೆಡೆ ಸುದ್ದಿಗಳೂ ಕೂಡ ಹೀಗೆ ಹರಿದಾಡಿದ್ದವು. ಆದರೆ, ಪೈಲ್ವಾನ್ ಮತ್ತೂ ಮುಂದಕ್ಕೆ ಹೋಗಿ ಸೆಪ್ಟೆಂಬರ್ 12ಕ್ಕೆ ರಿಲೀಸ್ ಆಗಲಿದೆ ಎನ್ನುವುದು ನಿನ್ನೆಯಷ್ಟೇಯಾದ ಪಕ್ಕಾ ವರದಿ. ಆದರೆ,. ಈ ಪೈಲ್ವಾನ್ ಮಾತ್ರವಲ್ಲದೆ ಕುರುಕ್ಷೇತ್ರ ಕೂಡ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ.


ಕುರುಕ್ಷೇತ್ರ ಆಗಸ್ಟ್ 2ಕ್ಕೆ ರಿಲೀಸ್ ಆಗುತ್ತಿಲ್ಲ. ಆಗಸ್ಟ್ 9ಕ್ಕೆ ಮುಂದೂಡಲ್ಪಟ್ಟಿದೆ ಎಂದು ತಿಳಿದುಬಂದಿದೆ. ಮುನಿರತ್ನ ನಿರ್ಮಾಣದ, ನಾಗಣ್ಣ ನಿರ್ದೇಶನದ ಈ ಸಿನಿಮಾದಲ್ಲಿ ದರ್ಶನ್ ಅವರಲ್ಲದೆ ರೆಬೆಲ್ ಸ್ಟಾರ್ ಅಂಬರೀಶ್, ಅರ್ಜುನ್ ಸರ್ಜಾ, ಕ್ರೇಜಿಸ್ಟಾರ್ ರವಿಚಂದ್ರನ್, ಶಶಿಕುಮಾರ್, ನಿಖಿಲ್ ಕುಮಾರಸ್ವಾಮಿ, ರವಿಶಂಕರ್ ಸೇರಿದಂತೆ ದೊಡ್ಡ ತಾರಗಣವಿದೆ.
ಪೈಲ್ವಾನ್ ಹೆಬ್ಬುಲಿ ಖ್ಯಾತಿಯ ಕೃಷ್ಣ ಡೈರೆಕ್ಷನ್ ಮಾಡಿರುವ ಸಿನಿಮಾ, ಈ ಸಿನಿಮಾದಲ್ಲಿ ಸುದೀಪ್ ಗೆ ನಾಯಕಿಯಾಗಿ ಆಕಾಂಕ್ಷ ನಟಿಸಿದ್ದಾರೆ. ಸುನೀಲ್ ಶೆಟ್ಟಿ, ಸುಶಾಂತ್ ಸಿಂಗ್ ಸೇರಿದಂತೆ ಅನೇಕ ಸ್ಟಾರ್​ ನಟರು ಅಭಿನಯಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...