Big Breaking :ಎಲ್ಲಾ ಅತೃಪ್ತ ಶಾಸಕರಿಗೂ ಅನರ್ಹತೆ ಶಿಕ್ಷೆ ನೀಡಿದ ಸ್ಪೀಕರ್ ರಮೇಶ್ ಕುಮಾರ್..!

Date:

ಮೈತ್ರಿ ಸರ್ಕಾರದ ಪತನಕ್ಕೆ ಮುಹೂರ್ತವಿಟ್ಟು ರಾಜೀನಾಮೆ ನೀಡಿ ಮುಂಬೈನಲ್ಲಿ ಕುಳಿತಿರುವ ಎಲ್ಲಾ ಅತೃಪ್ತ ಶಾಸಕರಿಗೂ ಅನರ್ಹತೆ ಶಿಕ್ಷೆ ನೀಡಿ ಸ್ಪೀಕರ್ರ ರಮೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಇಂದು 14 ಅತೃಪ್ತರಿಗೆ ಅನರ್ಹತೆ ಶಿಕ್ಷೆ ನೀಡಿ ಸ್ಪೀಕರ್ ಆದೇಶ ಹೊರಡಿಸಿದ್ದಾರೆ. ಒಟ್ಟು 17 ಮಂದಿ ಶಾಸಕರನ್ನು ಅನರ್ಹಗೊಳಿಸಿದಂತಾಗಿದೆ,
ಶಾಸಕರಾದ ಪ್ರತಾಪ್‌ಗೌಡ ಪಾಟೀಲ್, ಬಿ ಸಿ ಪಾಟೀಲ್, ಶಿವರಾಮ ಹೆಬ್ಬಾರ್, ಎಸ್ ಟಿ ಸೋಮಶೇಖರ್, ಬೈರತಿ ಬಸವರಾಜು, ಆನಂದ್ ಸಿಂಗ್ ರೋಷನ್ ಬೇಗ್, ಮುನಿರತ್ನ, ಸುಧಾಕರ್, ಎಂಟಿಬಿ ನಾಗರಾಜ್, ಎಚ್ ವಿಶ್ವನಾಥ್, ನಾರಾಯಣಗೌಡ, ಗೋಪಾಲಯ್ಯ, ಶ್ರೀಮಂತ ಪಾಟೀಲ್‌ರನ್ನು ಅನರ್ಹಗೊಳಿಸಿದ್ದಾರೆ.
ಮೂರುದಿನಗಳ ಹಿಂದೆಯಷ್ಟೇ ಮೂರು ಮಂದಿ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಅಂದು ರಮೇಶ್ ಜಾರಕಿಹೊಳಿ, ಮಹೇಶ್ ಕುಮಠಳ್ಳಿ, ಆರ್. ಶಂಕರ್ ಅವರನ್ನು ಸ್ಪೀಕರ್ ಅನರ್ಹಗೊಳಿಸಿದ್ದರು. ಇಂದು 14 ಮಂದಿಗೆ ಅದೇ ಶಾಕ್ ನೀಡಿದ್ದಾರೆ.


ನಾಳೆ ಬಿ,ಎಸ್ ಯಡಿಯೂರಪ್ಪ ವಿಶ್ವಾಸ ಮತ ಸಾಬೀತು ಪಡಿಸಲಿದ್ದಾರೆ. ಒಟ್ಟು 17 ಮಂದಿ ಶಾಸಕರ ಅನರ್ಹತೆಯಿಂದ ಸದನದ ಸಂಖ್ಯಾಬಲ 208ಕ್ಕೆ ಕುಸಿದಿದ್ದು ಮ್ಯಾಜಿಕ್ ನಂಬರ್​ 105 ಆಗಿದೆ. ಬಿಜೆಪಿ ಆ ಬಲವನ್ನು ಹೊಂದಿದೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...