ಮಳೆಗಾಲದಲ್ಲಿ ಶೀತ, ಜ್ವರ ಬಂದಾಗ ಸುಸ್ತು, ಆಯಾಸ ಆಗುವುದು ಸಹಜ. ಈ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಆಹಾರಗಳನ್ನು ಸೇವಿಸುವುದು ಉತ್ತಮ. ಆದ್ದರಿಂದ ಜ್ವರದಿಂದ ಉಂಟಾದ ಸುಸ್ತನ್ನು ನಿವಾರಿಸಲು ಈ ಹಣ್ಣಿನ ಜ್ಯೂಸ್ ಗಳನ್ನು ಸೇವಿಸಿ.
ಕಿತ್ತಳೆ ಅಥವಾ ಮೂಸಂಬಿಯಲ್ಲಿ ವಿಟಮಿನ್ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಸೋಂಕುಗಳ ವಿರುದ್ಧ ಹೋರಾಡುವಲ್ಲಿ ಈ ಜ್ಯೂಸ್ ಸಹಕಾರಿಯಾಗಿದೆ.
ಸ್ಟ್ರಾಬೆರಿ ಮತ್ತು ಕಿವಿ ಫ್ರೂಟ್ ಜೊತೆ 2 ಪುದೀನಾ ಎಲೆ ಹಾಕಿ ಜ್ಯೂಸ್ ಮಾಡಿ ಕುಡಿದರೆ ಸುಸ್ತು ಬೇಗನೆ ಕಡಿಮೆಯಾಗುವುದು. ಕಿವಿ ಫ್ರೂಟ್ ದೇಹದಲ್ಲಿ ಬಿಳಿ ರಕ್ತಕಣಗಳು ಹೆಚ್ಚುವಂತೆ ಮಾಡುತ್ತದೆ.