ಆ ವೆಬ್​ ಸೈಟ್​​ನವರೇ ಕುರುಕ್ಷೇತ್ರ ಕದ್ದಿದ್ದಾರೆ..!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾ ಸೆಟ್ಟೇರಿದಲ್ಲಿಂದಲೂ ಬಹಳಷ್ಟು ಸದ್ದು ಮಾಡಿತ್ತು. ಪೋಸ್ಟರ್, ಟೀಸರ್, ಟ್ರೇಲರ್, ಸಾಂಗ್​ಗಳಿಂದ ಸೌಂಡು ಮಾಡಿ, ಯೂಟ್ಯೂಬ್​ನಲ್ಲಿ ಟ್ರೆಂಡ್ ಸೆಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹವಾ ಕ್ರಿಯೇಟ್ ಮಾಡಿ ಆಗಸ್ಟ್ 9ಕ್ಕೆ ಥಿಯೇಟರ್​ಗೆ ಲಗ್ಗೆ ಇಟ್ಟಿತ್ತು. ನಿರೀಕ್ಷೆಗೂ ಮೀರಿ ಸದ್ದು ಮಾಡಿತು.. ಯಶಸ್ವಿ ಪ್ರದರ್ಶನವನ್ನೂ ಕಂಡಿತು.
ದರ್ಶನ್ ಅವರು ಮಾತ್ರವಲ್ಲದೆ ರೆಬೆಲ್ ಸ್ಟಾರ್​ ಅಂಬರೀಶ್, ಕ್ರೇಜಿಸ್ಟಾರ್ ರವಿಚಂದ್ರನ್, ಶಶಿಕುಮಾರ್, ಅರ್ಜುನ್ ಸರ್ಜಾ, ನಿಖಿಲ್ ಕುಮಾರಸ್ವಾಮಿ, ಸೋನುಸೂದ್, ಡ್ಯಾನಿಷ್ ಅಕ್ತರ್ ಸೇರಿದಂತೆ ಅನೇಕ ಸ್ಟಾರ್ ನಟರು ಕುರುಕ್ಷೇತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಮುನಿರತ್ನ ನಿರ್ಮಾಣದ ಈ ಸಿನಿಮಾಕ್ಕೆ ನಾಗಣ್ಣ ಆ್ಯಕ್ಷನ್ ಕಟ್ ಹೇಳಿದ್ದಾರೆ.
ವಾರದ ನಂತರವೂ ಎಲ್ಲಾ ಕಡೆ ಉತ್ತಮ ಪ್ರದರ್ಶನ ಕಾಣುತ್ತಿರುವ ಕುರುಕ್ಷೇತ್ರಕ್ಕೆ ಈಗ ಪೈರಸಿ ಕಾಟ ಎದುರಾಗಿದೆ. ಇದೇ ದರ್ಶನ್ ಅವರ ಯಜಮಾನ, ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ನಟ ಸಾರ್ವಭೌಮ ಮೊದಲಾದ ಸಿನಿಮಾಗಳನ್ನು ರಿಲೀಸ್ ಆದ ದಿನವೇ ಲೀಕ್ ಮಾಡಿದ್ದ ವೆಬ್​ ಸೈಟ್ ಈಗ ಕುರುಕ್ಷೇತ್ರವನ್ನೂ ಲೀಕ್ ಮಾಡಿದೆ.
ಆಗಸ್ಟ್ 9ಕ್ಕೆ ಕನ್ನಡ ಮತ್ತು ತೆಲುಗಿನಲ್ಲಿ ಸಿನಿಮಾ ರಿಲೀಸ್ ಆಗಿತ್ತು. ಅದಾದ ಮೇಲೆ ಆಗಸ್ಟ್ 15ಕ್ಕೆ ತಮಿಳಿನಲ್ಲೂ ರಿಲೀಸ್ ಆಗಿತ್ತು. ವಾರಾಂತ್ಯಕ್ಕೆ 30 ಕೋಟಿ ಹಣವನ್ನು ಬಾಚಿ ಕೊಂಡಿದೆ. ಆದರೆ, ಎರಡನೇ ವಾರಕ್ಕೆ ಕಾಲಿಡುತ್ತಿದ್ದು ಪೈರಸಿ ಕಂಟಕ ಎದುರಾಗಿದೆ.


ಹೌದು, ತಮಿಳಿನಲ್ಲಿ ತೆರೆಕಂಡ ದಿನವೇ, ಅಂದರೆ ಆಗಸ್ಟ್ 15ಕ್ಕೆ ಸಿನಿಮಾ ಲೀಕ್ ಆಗಿದೆ. ತಮಿಳು ರಾಕರ್ಸ್​ ಕುರುಕ್ಷೇತ್ರವನ್ನು ಲೀಕ್ ಮಾಡಿದ ಕಿಡಿಗೇಡಿಗಳು. ಈ ವೆಬ್​ ಸೈಟ್​ವರು ಈ ಹಿಂದೆಯೂ ಸಾಕಷ್ಟು ಸಿನಿಮಾಗಳನ್ನು ಕದ್ದಿದ್ದರು. ಈಗ ಕುರುಕ್ಷೇತ್ರಕ್ಕೆ ಇವರ ತಲೆ ನೋವು ಎದುರಾಗಿದೆ. ಇದರಿಂದ ಕುರುಕ್ಷೇತ್ರ ಗಳಿಕೆಗೂ ನಷ್ಟ ಎದುರಾಗಿದೆ. ಇನ್ನು ಕುರುಕ್ಷೇತ್ರ 3 ಡಿ ಮತ್ತು 2ಡಿ ವರ್ಷನ್​ನಲ್ಲಿ ರಿಲೀಸ್ ಆಗಿದ್ದು, ನಿರೀಕ್ಷೆಗೂ ಮೀರಿ ಚೆನ್ನಾಗಿ ಮೂಡಿ ಬಂದಿದೆ.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...