ಮುನಿರತ್ನ ಬಿಜೆಪಿ ಸೇರ್ಪಡೆ ವಿರೋಧಿಸಿದ್ದಕ್ಕೆ ! ಏನ್ ಆಯ್ತು ಗೊತ್ತಾ ?

admin
By admin
0 Min Read

ಜ್ಞಾನ ಭಾರತಿ ವಾರ್ಡ್ ಅಧ್ಯಕ್ಷ ಎನ್.ಆರ್. ಕುಮಾರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕುಮಾರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎನ್ನಲಾಗಿದೆ.

ಬೆಂಗಳೂರು ನಗರ ಅಧ್ಯಕ್ಷ ಮುನಿರಾಜು ಸೂಚನೆ ಮೇರೆಗೆ ರಾಜರಾಜೇಶ್ವರಿ ನಗರ ಬಿಜೆಪಿ ಅಧ್ಯಕ್ಷ ಲಕ್ಷ್ಮಿಕಾಂತ ರೆಡ್ಡಿ 6 ವರ್ಷಗಳ ಕಾಲ ಕುಮಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರಿಗೆ ಮುನಿರತ್ನ ಕಿರುಕುಳ ನೀಡಿದ್ದ ಹಿನ್ನಲೆಯಲ್ಲಿ ಅವರ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿ ಕುಮಾರ್ ಪತ್ರ ಬರೆದಿದ್ದರು. ಆದರೆ, ಪಕ್ಷದ ವರಿಷ್ಠರು ಮುನಿರತ್ನ ಸೇರ್ಪಡೆಗೆ ತೀರ್ಮಾನಿಸಿದ್ದಾರೆ , ಹೀಗಾಗಿ ಕುಮಾರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎನ್ನಲಾಗಿದೆ .

Share This Article