ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣ ಕುಮಾರಸ್ವಾಮಿ ಅವರಿಗೆ ದೊಡ್ಡ ತಲೆನೋವಾಗಿತ್ತು ಇದೀಗ ಆ ಪ್ರಕರಣದ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಲ್ಲಿ ಕುಮಾರಸ್ವಾಮಿ ಹೆಸರು ಇಲ್ಲದಿರುವುದು . ಕುಮಾರಸ್ವಾಮಿ ಅವರಿಗೆ ಕೊಂಚ ರಿಲೀಫ್ ಆಗಿದೆ ಈ ಕೇಸಿನಲ್ಲಿ ಸರಿಯಾದ ಸಾಕ್ಷ್ಯಾಧಾರವಿಲ್ಲದೆ ಕಾರಣಕ್ಕಾಗಿ ಕುಮಾರಸ್ವಾಮಿ ಅವರ ಹೆಸರನ್ನು ಕೋರ್ಟ್ ಕೈಬಿಟ್ಟಿದೆ . ಅಕ್ರಮವಾಗಿ ಪಾಕ್ಗೆ ಅದಿರು ಸಾಗಣೆಯಾಗಿದ್ದು,
ರಾಜ್ಯದ ಬೊಕ್ಕಸಕ್ಕೆ 250 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಹಿಂದಿನ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ವರದಿ ನೀಡಿದ್ದರು. ಈ ವಿಚಾರವಾಗಿ ಕುಮಾರಸ್ವಾಮಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು . ಇದೇ ವಿಚಾರವಾಗಿ ತಲೆಕೆಡಿಸಿಕೊಂಡಿದ್ದ ಕುಮಾರಸ್ವಾಮಿ ಅವರು ಈಗ ಕೊಂಚ ನಿರಾಳರಾಗಿದ್ದಾರೆ ಎಂದು ಹೇಳಲಾಗುತ್ತಿದೆ