ತಿರುಪತಿ ದೇವಸ್ಥಾನದ ಸದಸ್ಯೆಯಾಗಿ ಇನ್ಫೋಸಿಸ್ ನ ಸುಧಾಮೂರ್ತಿ ಆಯ್ಕೆ..

Date:

ತಿರುಪತಿ ತಿರುಮಲ ದೇವಸ್ಥಾನ ಮಂಡಳಿಗೆ (TTD) ನೂತನ ಸದಸ್ಯರನ್ನು ಆಯ್ಕೆ ಮಾಡಬೇಕೆಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ರೆಡ್ಡಿ ಅವರು ಆದೇಶ ನೀಡಿದ್ದರು. ಈ ಆದೇಶದ ಪ್ರಕಾರ ಇದೀಗ ಟಿಟಿಡಿಗೆ ನೂತನ ಸದಸ್ಯರ ನೇಮಕ ಮಾಡಲಾಗಿದ್ದು ಕರ್ನಾಟಕದಿಂದ ಮೂವರು ಸದಸ್ಯರನ್ನು ನೇಮಿಸಲಾಗಿದೆ.

ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ ಸುಧಾ ಮೂರ್ತಿ ಅವರನ್ನು ಟಿಟಿಡಿ ಸದಸ್ಯೆಯಾಗಿ ನೇಮಕ ಮಾಡಲಾಗಿದ್ದು ಈ ಹಿಂದೆಯೂ ಸಹ ಸುಧಾಮೂರ್ತಿ ಅವರನ್ನು ಟಿಟಿಡಿ ಮಂಡಳಿ ಸದಸ್ಯೆಯಾಗಿ ನೇಮಕ ಮಾಡಲಾಗಿತ್ತು ತದನಂತರ ಸುಧಾಮೂರ್ತಿಯವರು ಟಿಟಿಡಿಗೆ ರಾಜೀನಾಮೆಯನ್ನು ಸಲ್ಲಿಸಿದ್ದರು. ಇದೀಗ ಮತ್ತೊಮ್ಮೆ ಸುಧಾಮೂರ್ತಿಯವರನ್ನು ಟಿಟಿಡಿ ಸದಸ್ಯೆಯಾಗಿ ನೇಮಕ ಮಾಡಲಾಗಿದ್ದು ಅವರ ಜೊತೆ ಕರ್ನಾಟಕದ ಸಂಪತ್ತು ರವಿ ನಾರಾಯಣ & ರಮೇಶ್ ಶೆಟ್ಟಿ ಅವರನ್ನು ಟಿಟಿಡಿ ಸದಸ್ಯರಾಗಿ ನೇಮಿಸಲಾಗಿದೆ.

ವಿಶೇಷವೇನೆಂದರೆ ಕಳೆದ ಬಾರಿ ಚಂದ್ರಬಾಬು ನಾಯ್ಡು ಅವರ ಸರ್ಕಾರ ಇದ್ದಾಗ ಕರ್ನಾಟಕದಿಂದ ಕೇವಲ ಸುಧಾಮೂರ್ತಿಯವರನ್ನು ಸದಸ್ಯೆಯಾಗಿ ನೇಮಿಸಲಾಗಿತ್ತು ಆದರೆ ಈ ಬಾರಿ ಒಟ್ಟು ಮೂವರು ಸದಸ್ಯರನ್ನು ಟಿಟಿಡಿಗೆ ನೇಮಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...