ತಿರುಪತಿ ದೇವಸ್ಥಾನದ ಸದಸ್ಯೆಯಾಗಿ ಇನ್ಫೋಸಿಸ್ ನ ಸುಧಾಮೂರ್ತಿ ಆಯ್ಕೆ..

Date:

ತಿರುಪತಿ ತಿರುಮಲ ದೇವಸ್ಥಾನ ಮಂಡಳಿಗೆ (TTD) ನೂತನ ಸದಸ್ಯರನ್ನು ಆಯ್ಕೆ ಮಾಡಬೇಕೆಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ರೆಡ್ಡಿ ಅವರು ಆದೇಶ ನೀಡಿದ್ದರು. ಈ ಆದೇಶದ ಪ್ರಕಾರ ಇದೀಗ ಟಿಟಿಡಿಗೆ ನೂತನ ಸದಸ್ಯರ ನೇಮಕ ಮಾಡಲಾಗಿದ್ದು ಕರ್ನಾಟಕದಿಂದ ಮೂವರು ಸದಸ್ಯರನ್ನು ನೇಮಿಸಲಾಗಿದೆ.

ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ ಸುಧಾ ಮೂರ್ತಿ ಅವರನ್ನು ಟಿಟಿಡಿ ಸದಸ್ಯೆಯಾಗಿ ನೇಮಕ ಮಾಡಲಾಗಿದ್ದು ಈ ಹಿಂದೆಯೂ ಸಹ ಸುಧಾಮೂರ್ತಿ ಅವರನ್ನು ಟಿಟಿಡಿ ಮಂಡಳಿ ಸದಸ್ಯೆಯಾಗಿ ನೇಮಕ ಮಾಡಲಾಗಿತ್ತು ತದನಂತರ ಸುಧಾಮೂರ್ತಿಯವರು ಟಿಟಿಡಿಗೆ ರಾಜೀನಾಮೆಯನ್ನು ಸಲ್ಲಿಸಿದ್ದರು. ಇದೀಗ ಮತ್ತೊಮ್ಮೆ ಸುಧಾಮೂರ್ತಿಯವರನ್ನು ಟಿಟಿಡಿ ಸದಸ್ಯೆಯಾಗಿ ನೇಮಕ ಮಾಡಲಾಗಿದ್ದು ಅವರ ಜೊತೆ ಕರ್ನಾಟಕದ ಸಂಪತ್ತು ರವಿ ನಾರಾಯಣ & ರಮೇಶ್ ಶೆಟ್ಟಿ ಅವರನ್ನು ಟಿಟಿಡಿ ಸದಸ್ಯರಾಗಿ ನೇಮಿಸಲಾಗಿದೆ.

ವಿಶೇಷವೇನೆಂದರೆ ಕಳೆದ ಬಾರಿ ಚಂದ್ರಬಾಬು ನಾಯ್ಡು ಅವರ ಸರ್ಕಾರ ಇದ್ದಾಗ ಕರ್ನಾಟಕದಿಂದ ಕೇವಲ ಸುಧಾಮೂರ್ತಿಯವರನ್ನು ಸದಸ್ಯೆಯಾಗಿ ನೇಮಿಸಲಾಗಿತ್ತು ಆದರೆ ಈ ಬಾರಿ ಒಟ್ಟು ಮೂವರು ಸದಸ್ಯರನ್ನು ಟಿಟಿಡಿಗೆ ನೇಮಿಸಲಾಗಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...

World Cup 2025: ವಿಶ್ವ ಗೆದ್ದ ಭಾರತದ ವನಿತಾ ಪಡೆ..! ಇತಿಹಾಸ ಬರೆದ ಸಿಂಹಿಣಿಯರು

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ 2025ರ...

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...