ಉಪಚುನಾವಣೆ ಬಗ್ಗೆ ಹೆಚ್ ವಿಶ್ವನಾಥ್ ಹೇಳಿದ್ದೇನು ಗೊತ್ತಾ ?

admin
By admin
0 Min Read

ಶಾಸಕರ ಅನರ್ಹತೆ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ಇದೆ. ಈಗಿರುವ ಪೀಠದಿಂದ ನಮ್ಮ ಕೇಸ್ ವರ್ಗಾವಣೆ ಆಗಬಹುದು. ಸಾಂವಿಧಾನಿಕ ಪೀಠಕ್ಕೆ ಪ್ರಕರಣ ವರ್ಗಾವಣೆ ಆಗಬಹುದು. ಪರಿಸ್ಥಿತಿ ಹೀಗಿರುವಾಗ ಯಾರೋ ವದಂತಿಯನ್ನು ಹಬ್ಬಿಸುತ್ತಿದ್ದಾರೆ ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ್ ಹೇಳಿದ್ದಾರೆ .

ಹುಣಸೂರು ಕ್ಷೇತ್ರದ ಟಿಕೆಟ್ ಬೇರೆಯವರಿಗೆ ಕೊಡಲಾಗುತ್ತದೆ ಎಂದು ವದಂತಿ ಹಬ್ಬಿಸುತ್ತಿದ್ದಾರೆ. ಯಾವ ಶಾಸಕ ಕ್ಷೇತ್ರ ಬಿಟ್ಟು ಕೊಡುವುದಿಲ್ಲ. ಗೆದ್ದಿರುವ ಕ್ಷೇತ್ರ ಆ ಶಾಸಕನ ಜೀವನವಾಗಿರುತ್ತದೆ. ಚುನಾವಣೆ ನಡೆದಲ್ಲಿ ಹುಣಸೂರಿನಿಂದ ನಾನೇ ಸ್ಪರ್ಧೆ ಮಾಡುತ್ತೇನೆ.

Share This Article