“ನಿಮಗೆ ಕನ್ನಡ ಬರಲ್ವಾ ಸರಿಯಾಗಿ ಕೆಲಸ ಮಾಡಿ” ವಾರ್ನಿಂಗ್ ನೀಡಿದ ಯಡಿಯೂರಪ್ಪ..!

Date:

ಉತ್ತರ ಕರ್ನಾಟಕದಲ್ಲಿ ಸುರಿದ ಭಾರಿ ಮಳೆಗೆ ಅಪಾರವಾದ ಹಾನಿ ಉಂಟಾದ ಹಿನ್ನೆಲೆಯಲ್ಲಿ ನೆರೆ ಪರಿಹಾರ ಕುರಿತಾಗಿ ಸಭೆ ನಡೆಸಲು ಇಂದು ಯಡಿಯೂರಪ್ಪನವರು ಬೆಳಗಾವಿಗೆ ಭೇಟಿ ನೀಡಿದ್ದರು. ಬೆಳಗಾವಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಭೆಯನ್ನು ಕೈಗೊಂಡಿದ್ದ ಯಡಿಯೂರಪ್ಪನವರಿಗೆ ಜಿಲ್ಲೆಯ ಹಲವಾರು ಶಾಸಕರು ಜಿಲ್ಲಾ ಪಂಚಾಯತ್ ಅಧಿಕಾರಿಗಳ ವಿರುದ್ಧ ದೂರಿನ ಪಟ್ಟಿ ಸಲ್ಲಿಸಿದರು.

ಹೌದು ನೆರೆ ಪರಿಹಾರದ ಕುರಿತಾಗಿ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದನೆ ನೀಡುತ್ತಿಲ್ಲ ಎಂಬ ಕಾರಣಕ್ಕೆ ಹಲವಾರು ದೂರುಗಳನ್ನು ಯಡಿಯೂರಪ್ಪನವರಿಗೆ ಶಾಸಕರು ನೀಡಿದರು ಇದರಿಂದ ಸಿಡಿಮಿಡಿಗೊಂಡ ಯಡಿಯೂರಪ್ಪನವರು ಅಧಿಕಾರಿಗಳಿಗೆ ” ನಿಮಗೆ ಕನ್ನಡ ಬರಲ್ವಾ ಸರಿಯಾಗಿ ಕೆಲಸ ಮಾಡಿ ಇನ್ನು 15 ದಿನಗಳ ನಂತರ ನಾನು ಮತ್ತೆ ಇಲ್ಲಿಗೆ ಬರುತ್ತೇನೆ ಅಷ್ಟರಲ್ಲಿ ಯಾವುದೇ ರೀತಿಯ ದೂರು ಬರದಂತೆ ನೋಡಿಕೊಳ್ಳಬೇಕು” ಎಂದು ವಾರ್ನ್ ಮಾಡಿದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...