ಕೋಟ್ಯಧಿಪತಿಯಲ್ಲಿ ಗೆದ್ದ ಹಣದಲ್ಲಿ ಶಾಲಾ ಕಾಪೌಂಡ್ ನಿರ್ಮಾಣಕ್ಕೆ ಮುಂದಾದ ಪೋರ!

Date:

ಹಾಸನ : ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ, ನಟ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಡೆಸಿಕೊಡೋ ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಕೋಟ್ಯಧಿಪತಿಯಲ್ಲಿ ಗೆದ್ದ ಹಣವನ್ನು ಬಾಲಕ ತನ್ನ ಶಾಲೆಯ ಕಾಂಪೌಂಡ್ ನಿರ್ಮಾಣಕ್ಕೆ ಮುಕ್ತ ಮನಸ್ಸಿಂದ ನೀಡಿ ರಿಯಲ್ ಹೀರೋ ಆಗಿದ್ದಾನೆ.
ಆತ ಮೈಸೂರು ಜಿಲ್ಲೆಯ ಕೆಡಗ ಗ್ರಾಮದ ತೇಜಸ್. ಈತ ಹಾಸನದ ಕಟ್ಟಾಯ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ.
ಕನ್ನಡದ ಕೋಟ್ಯಧಿಪತಿಯಲ್ಲಿ 6, 40,000 ರೂ ಗೆದ್ದು, ಪೋಷಕರ, ಶಾಲೆಯ, ಶಿಕ್ಷಕರ, ಊರಿನ ಕೀರ್ತಿ ಬೆಳಗಿದ್ದಾನೆ. ಗೆಲುವಿಗಿಂತ ಮಿಗಿಲಾಗಿ ಗೆದ್ದ ಹಣದ ಪಾಲನ್ನು ಶಾಲಾ ಕಾರ್ಯಕ್ಕೆ ನೀಡಿ ಮಾದರಿಯಾಗಿದ್ದಾನೆ.


ಈ ಬಗ್ಗೆ, ಹಣ ಗೆದ್ದಿದ್ದಕ್ಕಿಂತ, ಹಾಟ್ ಸೀಟಲ್ಲಿ ಕೂತು ಆಟವಾಡಿದ್ದು ಖುಷಿಯಾಗಿದೆ. ಪುನೀತ್ ರಾಜ್‌ಕುಮಾರ್ ಜೊತೆ ಕುಳಿತಿದ್ದು ಹೆಮ್ಮೆ ಎಂದು ತೇಜಸ್ ಸಂತಸ ಹಂಚಿಕೊAಡಿದ್ದಾನೆ. ಮುಖ್ಯೋಪಾಧ್ಯಯ ಶೇಖರ್ ಸೇರಿದಂತೆ ತನ್ನ ಗುರುಗಳು, ಪೋಷಕರು ನೀಡಿದ ಸಹಕಾರವನ್ನು ಸ್ಮರಿಸಿದ್ದಾನೆ. ಅಮ್ಮ ಅಪ್ಪಗೆ ನಾನು ಹಣ ಗೆದ್ದಿರೋದು ಖುಷಿಕೊಟ್ಟಿದೆ. ಆದರೆ, ಹಣ ಗೆದ್ದೆನ್ನೆಂದು ಗರ್ವ ಪಡಬೇಡ. ಚೆನ್ನಾಗಿ ಓದುವ ಕಡೆಯೂ ಗಮನ ಕೊಡು ಎಂದಿದ್ದಾರೆ ಎಂದು ವಿನಮ್ರತೆಯಿಂದ ಹೇಳಿಕೊಳ್ಳುತ್ತಾನೆ.

Share post:

Subscribe

spot_imgspot_img

Popular

More like this
Related

ವೈಟ್‌ಫೀಲ್ಡ್ ಪೊಲೀಸರ ಕಾರ್ಯಾಚರಣೆ: ಡ್ರಗ್ ಪೆಡ್ಲರ್ ಬಂಧನ

ವೈಟ್‌ಫೀಲ್ಡ್ ಪೊಲೀಸರ ಕಾರ್ಯಾಚರಣೆ: ಡ್ರಗ್ ಪೆಡ್ಲರ್ ಬಂಧನ ಬೆಂಗಳೂರು ನಗರದ ವೈಟ್‌ಫೀಲ್ಡ್ ಪೊಲೀಸ್...

ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ: ಹೆಚ್.ಡಿ. ಕುಮಾರಸ್ವಾಮಿ

ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ: ಹೆಚ್.ಡಿ....

ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು – ಸಚಿವ ಜೋಶಿ

ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು -...

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ ಹಾವೇರಿ: ಇರಾನ್...