ಅಲ್ಲೊಂದು ಮದುವೆ ನಡೆಯುತ್ತಿತ್ತು ವರ ಮತ್ತು ವಧು ಕುಟುಂಬದ ಸದಸ್ಯರೆಲ್ಲರೂ ತುಂಬಾ ಕಳಕಳಿಯಿಂದ ಸಂತೋಷ ಪಡುತ್ತಾ ಮದುವೆಯನ್ನು ನಡೆಸಲು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದರು. ಇನ್ನೇನು ಕೆಲವೇ ಗಂಟೆಗಳಲ್ಲಿ ವರ ವಧುವಿಗೆ ತಾಳಿ ಕಟ್ಟುತ್ತಾನೆ ಆ ಸಂದರ್ಭವನ್ನು ಎಲ್ಲರೂ ಕಣ್ತುಂಬಿಕೊಳ್ಳೋಣ ಎಂದು ಕಾಯುತ್ತಾ ಇರುವಂತಹ ಸಂದರ್ಭದಲ್ಲಿ ನಡೆಯಬಾರದ ಘಟನೆಯೊಂದು ನಡೆದುಹೋಯಿತು. ಹೌದು ಇನ್ನೇನು ಕೆಲವೇ ನಿಮಿಷಗಳಲ್ಲಿ ತಾಳಿ ಕಟ್ಟಬೇಕಿದ್ದ ವರ ಸಂದೀಪ್ ಮಂಟಪದ ನಡುವೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಘಟನೆ ನಡೆದಿರುವುದು ತೆಲಂಗಾಣದ ಮೆಡ್ಚಲ್ ಜಿಲ್ಲೆಯಲ್ಲಿರುವ ಕೊಂಪಲ್ಲಿ ನಗರದ ಒಂದು ಫಂಕ್ಷನ್ ಹಾಲ್ ನಲ್ಲಿ.. ಹೈದರಾಬಾದ್ ನ ಕಂಪನಿಯೊಂದರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಂದೀಪ್ ಗೆ ಮದುವೆ ನಿಶ್ಚಯವಾಗಿತ್ತು. ಇನ್ನೇನು ಕೆಲವೇ ಗಂಟೆಗಳಲ್ಲಿ ನಡೆಯಬೇಕಿದ್ದ ಮದುವೆ ಫಂಕ್ಷನ್ ಹಾಲ್ ನಲ್ಲಿಯೇ ಸಂದೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಇದನ್ನು ಕಂಡ ವರನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ ಮತ್ತು ವರನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.