“ನನಗೆ ಯಾರಿಂದಲೂ ಯಾವುದೇ ರಾಜಕೀಯ ಒತ್ತಡವಿಲ್ಲ”

Date:

ಶಿವಲಿಂಗಾ ಶಿವಾಚಾರ್ಯ ಸ್ವಾಮೀಜಿ ಅವರು  ನನಗೆ ಯಾರಿಂದಲೂ ಯಾವುದೇ ರಾಜಕೀಯ ಒತ್ತಡವಿಲ್ಲ. ನಾವು ಗುರುಪರಂಪರೆಯಿಂದ ಬಂದವರು ಗುರುಗಳ ಮಾತಿನಿಂದ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ಹಿರೇಕೆರೂರು ಜೆಡಿಎಸ್ ಅಭ್ಯರ್ಥಿ ರಟ್ಟಿಹಳ್ಳಿಯ ಕಬ್ಬಿಣಕಂತಿ ಸ್ವಾಮೀಜಿಯವರು ಹೇಳಿದ್ದಾರೆ  ನಮ್ಮ ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳಿವೆ, ರಸ್ತೆ ಸರಿ ಇಲ್ಲ, ಕೆರೆಗಳು ಒಣಗುತ್ತಿವೆ. ಜನಸಾಮಾನ್ಯರು ತೀವ್ರ ಸಂಕಷ್ಟದಲ್ಲಿದ್ದಾರೆ.

ಹಾಗಾಗಿ, ಜನರ ಸಮಸ್ಯೆಯನ್ನ ಸರಿಪಡಿಸಲು ರಾಜಕೀಯಕ್ಕೆ ಬಂದಿದ್ವಿ. ಆದ್ರೆ, ಪಂಚಪೀಠದ ಗುರುಗಳ ಮಾತಿನಿಂದ ಹಿಂದೆ ಸರಿದಿದ್ದೇನೆಯೇ ಹೊರತು ಯಾವುದೇ ರಾಜಕೀಯ ಒತ್ತಡದಿಂದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾಳೆ ನಾಮಪತ್ರ ವಾಪಸ್ ಪಡೆಯಲಿದ್ದು, ಸರ್ಕಾರದ ಪ್ರತಿನಿಧಿಯಾಗಿ ಬಂದ ಬಿ.ವೈ.ರಾಘವೇಂದ್ರ ಅವರ ಬಳಿಯೂ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಒಂದು ವೇಳೆ, ಸೋಲು-ಗೆಲುವಿನ ಬಳಿಕವೂ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಮನಸ್ಸು ಮಾಡದಿದ್ರೆ ಮತ್ತೆ ರಾಜಕೀಯಕ್ಕೆ ಬರೋದಾಗಿ ಎಚ್ಚರಿಸಿದ್ದಾರೆ. ಕೋನರೆಡ್ಡಿ ಮಾಡಿರೋ ಆರೋಪಕ್ಕೆ, ಕೋನರೆಡ್ಡಿ ಆರೋಪ ಅಪ್ರಸ್ತುತ, ಅದನ್ನ ಕುಮಾರಸ್ವಾಮಿ ಹೇಳಬೇಕೇ ಹೊರತು ಕೋನರೆಡ್ಡಿಯಲ್ಲ ಎಂದು ಕೋನರೆಡ್ಡಿ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...