ಈ ದೇವಸ್ಥಾನದಲ್ಲಿ ರೋಹಿಣಿ ಸಿಂಧೂರಿ ಹೆಸರಲ್ಲಿ ನಡೆಯುತ್ತೆ ಪೂಜೆ…! ಕಾರಣ?

Date:

ಒಳ್ಳೆಯ ಕೆಲಸಕ್ಕೆ ಎಂದಿಗೂ ಬೆಲೆ ಇದೆ. ಜನ ಎಂದೂ ಒಳ್ಳೆಯ ಕೆಲಸಗಳನ್ನು ಗೌರವಿಸುತ್ತಾರೆ, ಪ್ರೀತಿಸುತ್ತಾರೆ. ರಾಜ್ಯದ ದಕ್ಷ ಐಎಎಸ್ ಅಧಿಕಾರಿಗಳಲ್ಲಿ ಒಬ್ಬರಾದ ರೋಹಿಣಿ ಸಿಂಧೂರಿ ಅವರು ಕೂಡ ಒಬ್ಬರು. ಅವರ ಕೆಲಸ, ಕಾರ್ಯವೈಖರಿ, ದಕ್ಷತೆ, ಪ್ರಾಮಾಣಿಕತೆಯನ್ನು ಪ್ರತಿಯೊಬ್ಬರೂ ಮೆಚ್ಚುತ್ತಾರೆ.
ಹಾಸನದ ಜಿಲ್ಲಾಧಿಕಾರಿ ಆಗಿರುವ ಇವರ ಹೆಸರಲ್ಲಿ ಪ್ರತಿ ಸೋಮವಾರ ವಿಶೇಷ ಪೂಜೆ ನೆರವೇರುತ್ತದೆ.

ಹೌದು, ಇಲ್ಲಿನ ಪುರಾತನ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಲ್ಲಿ ಪೂಜೆ ನಡೆಯುತ್ತದೆ.
ಈ ದೇವಸ್ಥಾನ ಶಿಥಿಲಾವಸ್ಥೆಗೆ ತಲುಪಿದ್ದರೂ ಯಾವ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸಿರಲಿಲ್ಲ. ಆದರೆ, 2017ರಲ್ಲಿ ಜಿಲ್ಲಾಧಿಕಾರಿಯಾಗಿ ಜಿಲ್ಲೆಗೆ ಬಂದ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ 30 ಲಕ್ಷ ರೂ ಹಣವನ್ನು ಬಿಡುಗಡೆ ಮಾಡಿಸಿದ್ದರು. ಇದೇ ಕಾರಣಕ್ಕೆ ಅಂದಿನಿಂದ ಈ ದೇವಸ್ಥಾನದಲ್ಲಿ ರೋಹಿಣಿ ಸಿಂಧೂರಿ ಹೆಸರಲ್ಲಿ ಸೋಮವಾರ ಅರ್ಚನೆ ಮಾಡಲಾಗುತ್ತಿದೆ.


ಬರೀ ಪೂಜೆ ಮಾತ್ರವಲ್ಲದೆ ರೋಹಿಣಿ ಸಿಂಧೂರಿ ಅವರ ಹೆಸರಲ್ಲಿ ಮರವನ್ನು ಬೆಳೆಸಲಾಗುತ್ತಿದೆ. ನಿತ್ಯ ಈ ಮರಕ್ಕೆ ಜಲಾಭಿಷೇಕ ಕೂಡ ನಡೆಯುತ್ತದೆ. ಜಿಲ್ಲಾದಿಕಾರಿಯಾಗಿ ತಮ್ಮ ವ್ಯಾಪ್ತಿಯಲ್ಲಿ ರೋಹಿಣಿ ಮಾಡಿದ ಕೆಲಸ ಈ ರೀತಿ ಸ್ಮರಿಸುವಂತೆ ಮಾಡಿದೆ.
ನೆಚ್ಚಿನ ಜಿಲ್ಲಾಧಿಕಾರಿಗಳಿಗೆ ಒಳ್ಳೆಯದಾಗಬೇಕೆಂದು ಜನ ಹೀಗೆ ಪೂಜೆ ಮಾಡಿಸುತ್ತಿರುವುದು ರೋಹಿಣಿ ಜನಪರ ಕಾಳಜಿ, ಪ್ರೀತಿಗೆ ಸಾಕ್ಷಿ.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...