ಉಪಚುನಾವಣೆ ಮುಗಿದಿದೆ ಆದರೆ ಎಲ್ಲರ ಕಣ್ಣು ಫಲಿತಾಂಶದಮೇಲೆ ಇದೆ ಆದರೆ ಇತ್ತ ಸಿದ್ದರಾಮಯ್ಯ ಅವರು ಈ 15 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 12 ಸ್ಥಾನಗಳನ್ನು ನಿಶ್ಚಿತವಾಗಿ ಗೆಲ್ಲಲಿದೆ. ಫಲಿತಾಂಶಕ್ಕೂ ಮೊದಲೇ ಮೈತ್ರಿ ಸರಕಾರ ರಚನೆ ಕುರಿತು ಮಾತನಾಡುವುದು ಸರಿಯಲ್ಲ ಅದನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಚರ್ಚಿಸಿ ನಂತರ ನಿರ್ಧರಿಸಬೇಕಿದೆ ಅಲ್ಲಿಯವರೆಗೂ ಆ ವಿಚಾರವನ್ನು ಮಾತನಾಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ .
ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಯಾಗಲು ಯಾರ ವಿರೋಧವೂ ಇಲ್ಲ. ಆದರೆ, ಫಲಿತಾಂಶಕ್ಕೂ ಮೊದಲೇ ಮೈತ್ರಿ, ಸಿಎಂ ಸ್ಥಾನದ ಬಗ್ಗೆ ಚರ್ಚೆ ಮಾಡುವುದು ‘ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲೆಸಿದಂತೆ ಆಗುತ್ತದೆ’ ಎಂದು ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದರು.