ಕಾಂಗ್ರೆಸ್ಸಿಗೆ ಸಿದ್ದರಾಮಯ್ಯ ಶನಿ, ಅವರ ದುರಹಂಕಾರದಿಂದಲೇ ಕಾಂಗ್ರೆಸ್ ಸೋತಿದ್ದು ಎಂದ ಹಿರಿಯ ನಾಯಕ!

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದುರಹಂಕಾರಿ. ಅವರು ಪಕ್ಷಕ್ಕೆ ಶನಿಯಿದ್ದಂತೆ. ಹಾಗಾಗಿ ಪಕ್ಷ ಸೋತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಮತ್ತೊಮ್ಮೆ ಸಿದ್ದು ವಿರುದ್ಧ ಗುಡುಗಿದ್ದಾರೆ.

ಉಪು ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಕಾಂಗ್ರೆಸ್ಸಿನವರಿಗೆ ಭವಿಷ್ಯವನ್ನು ಈ ಮೊದಲೇ ಹೇಳಿದ್ದೇನೆ. ನೀವು ಇದೇ ರೀತಿ ದುರಂಹಕಾರದಿಂದ ವರ್ತಿಸಿದರೆ ಬಿಜೆಪಿಯವರನ್ನು ತಡೆಯಲು ಆಗುವುದಿಲ್ಲ ಎಂದು ಕೈ ಮುಗಿದು ಪ್ರಾರ್ಥನೆ ಮಾಡಿದೆ. ಆದರೆ ನನ್ನ ಪಕ್ಷದವರಿಗೆ ಇನ್ನೂ ಅರ್ಥವಾಗುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದುರಹಂಕಾರಿಯಾಗಿದ್ದು, ಅವರು ಪಕ್ಷಕ್ಕೆ ಶನಿ ಇದ್ದಂತೆ. ಈ ಕಾರಣದಿಂದಲೇ ಪಕ್ಷ ಹೀನಾಯವಾಗಿ ಸೋತಿದೆ ಎಂದು ಹರಿಹಾಯ್ದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಳಪೆ ಕೆಲಸ ಮಾಡಿದ್ದು, ಮುಂದಿನ ಕೆಪಿಸಿಸಿ ಅಧ್ಯಕ್ಷರಾಗಲು ಡಿ ಕೆ ಶಿವಕುಮಾರ್ ಸೂಕ್ತ ವ್ಯಕ್ತಿ. ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದರೆ ಪಕ್ಷಕ್ಕೆ ಒಳ್ಳೆಯದಾಗುತ್ತದೆ. ಇದು ನನ್ನ ಅನುಭವದ ಮಾತು. ಅವರೊಬ್ಬ ಧೈರ್ಯವಂತ ಅನ್ನೋದನ್ನು ನಾನು ನೋಡಿದ್ದೇನೆ ಎಂದು ಹೊಗಳಿದರು. ಶಿವಕುಮಾರ್ ಯಾರಿಗೂ ಹೆದರದೆ ಪಕ್ಷದ ಕೆಲಸ ಮಾಡುತ್ತಾರೆ. ಅವರು ಕೆಪಿಸಿಸಿ ಅಧ್ಯಕ್ಷರಾದರೆ ಪಕ್ಷ ಉಳಿಯಲಿದೆ ಎಂದರು.

Share post:

Subscribe

spot_imgspot_img

Popular

More like this
Related

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಬೆಳಗಾವಿ:...

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ ಬೆಳಗಾವಿ: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ...

ಟೊಮೆಟೊ ತಿಂದ್ರೆ ಕಿಡ್ನಿ ಸ್ಟೋನ್ ಆಗುತ್ತಾ? ಇಲ್ಲಿದೆ ನೋಡಿ ನಿಮ್ಮ ಗೊಂದಲಕ್ಕೆ ಉತ್ತರ

ಟೊಮೆಟೊ ತಿಂದ್ರೆ ಕಿಡ್ನಿ ಸ್ಟೋನ್ ಆಗುತ್ತಾ? ಇಲ್ಲಿದೆ ನೋಡಿ ನಿಮ್ಮ ಗೊಂದಲಕ್ಕೆ...