ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದ ಅನರ್ಹ ಶಾಸಕರ ಪರಾಭವಕ್ಕಾಗಿ ವಿರೋಧ ಪಕ್ಷಗಳ ನಾಯಕರು ಭಾರಿ ಪ್ರಯತ್ನ ನಡೆಸಿದರೂ ಪ್ರಯೋಜನವಾಗಿಲ್ಲ ಉಪ ಚುನಾವಣೆಯಲ್ಲಿ ಬಿಜೆಪಿಯವರು ಅದೇ ಅನರ್ಹ ಶಾಸಕರನ್ನು ಇಟ್ಟುಕೊಂಡು ಜಯ ಸಾಧಿಸಿದೆ .
ಈ ಉಪ ಚುನಾವಣೆಯಲ್ಲಿ 13 ಅನರ್ಹ ಶಾಸಕರುಗಳು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದು, ಈ ಪೈಕಿ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಹೆಚ್.ವಿಶ್ವನಾಥ್ ಹಾಗೂ ಹೊಸಕೋಟೆಯಿಂದ ಕಣಕ್ಕಿಳಿದಿದ್ದ ಎಂಟಿಬಿ ನಾಗರಾಜ್ ಹೊರತುಪಡಿಸಿ ಉಳಿದೆಲ್ಲರೂ ಜಯ ಸಾಧಿಸಿದ್ದಾರೆ ಆದರೆ ನಾನು ಸೋತರೂ ಉಪ ಚುನಾವಣೆಯ ನನಗೆ ಸಂತಸ ತಂದಿದೆ ಎಂದು ವಿಶ್ವನಾಥ್ ಹೇಳಿದ್ದಾರೆ.